Featured

ಉಡುಪಿ: ಭಾರತ್ ಜೋಡೊ ಯಾತ್ರೆ – ದೇಶದ ರಾಜಕೀಯ ಇತಿಹಾಸದಲ್ಲಿ ಈ ಯಾತ್ರೆ ಒಂದು ತಿರುವು ನೀಡಲಿದೆ  : ದೀಪಕ್ ಕೋಟ್ಯಾನ್ – Vishwanews24

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತುರುವೇಕೆರೆ ತಾಲೂಕು ಮಾಯಸಂದ್ರ ಗ್ರಾಮದಲ್ಲಿ ಸಾಗಿದ್ದು, ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಅವರು ರಾಹುಲ್ ಅವರೊಂದಿಗೆ ಹೆಜ್ಜೆ ಹಾಕಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.ರಾಹುಲ್ ಗಾಂಧಿ ಜನಸಾಮಾನ್ಯರು ಹಾಗೂ ಅವರ ಸಮಸ್ಯೆ ಬಗ್ಗೆ ಹೆಚ್ಚು ಚಿಂತಿತರಾಗಿದ್ದು, ನಿರುದ್ಯೋಗ, ಬೆಲೆ ಏರಿಕೆ, ರೈತರ ಸಂಕಷ್ಟ, ಸಾಮಾಜಿಕ ಸಾಮರಸ್ಯದ ಬಗ್ಗೆ ಧ್ವನಿಯಾಗಿದ್ದಾರೆ. ಆರ್ಥಿಕ, ಸಾಮಾಜಿಕ ಅಸಮಾನತೆ, ರಾಜಕೀಯ ದ್ವೇಷದ ವಿಚಾರವಾಗಿ ಈ ಯಾತ್ರೆ ಮಾಡಲಾಗುತ್ತಿದೆ. ದೇಶದ ರಾಜಕೀಯ ಇತಿಹಾಸದಲ್ಲಿ ಈ ಯಾತ್ರೆ ಒಂದು ತಿರುವು ನೀಡಲಿದೆ ಎಂದು ದೀಪಕ್ ಕೋಟ್ಯಾನ್ ಹೇಳಿದರು.

ಪ್ರೇಯಸಿ ಜೊತೆಗಿನ ಫೋಟೊ ಪತ್ನಿಗೆ ಕಳುಹಿಸಿದ ಗಂಡ.. ಮನನೊಂದು ತವರು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಪತ್ನಿ – Vishwanews24

ನಿರೀಕ್ಷೆ ಮೀರಿ ಲಕ್ಷಾಂತರ ಜನ ಈ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಚ್ಚರಿಯ ವಿಷಯ ಎಂದರೆ, ರಾಹುಲ್ ಗಾಂಧಿ ಜೊತೆಗೆ ಜನ ಸಾಮಾನ್ಯರೂ ಕುಟುಂಬ ಸಮೇತವಾಗಿ ಮಕ್ಕಳಿಂದ ವೃದ್ಧರವರೆಗೂ ಉತ್ಸುಕತೆಯಿಂದ ಹೆಜ್ಜೆ ಹಾಕುತ್ತಿದ್ದಾರೆ. ಇದು ಯಾತ್ರೆಯನ್ನು ಜನ ಒಪ್ಪಿರುವುದಕ್ಕೆ ಸಾಕ್ಷಿ. ಪಾದಯಾತ್ರೆಯಲ್ಲಿ ಭಾಗವಹಿಸದವರು ಕೂಡ ಶುಭ ಕೋರಿ ಬೆಂಬಲಿಸುತ್ತಿದ್ದಾರೆ.

ಬಿಜೆಪಿಯವರು ಕ್ಷುಲ್ಲಕ ಕಾರಣಕ್ಕೆ ಟೀಕೆ ಮಾಡುತ್ತಿರುವುದು ರಾಹುಲ್ ಗಾಂಧಿಯವರ ಬಗ್ಗೆ ಬಿಜೆಪಿಯವರಿಗೆ ಇರುವ ಭಯದ ಕಾರಣದಿಂದ. ರಾಹುಲ್ ಅವರು ಯಾವ ಟಿ ಶರ್ಟ್, ಚಡ್ಡಿ ಹಾಕಿದರೆ ಬಿಜೆಪಿ ಅವರಿಗೆ ಸಮಸ್ಯೆ ಏನು? ಅವರು ಈ ಯಾತ್ರೆಗೆ ಅಡ್ಡಿ ಪಡಿಸಲು ಪ್ರಯತ್ನಿಸುತ್ತಿದ್ದು, ಈ ಯಾತ್ರೆ ಜನರ ಮನಸ್ಸಿನಲ್ಲಿ ಯಶಸ್ವಿಯಾಗಿ ಮುಟ್ಟಿದೆ. ದಿನೇ ದಿನೆ ಯಾತ್ರೆಯಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾಗುತ್ತಿದೆ ಎಂದಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

21 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

22 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

22 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago