ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತುರುವೇಕೆರೆ ತಾಲೂಕು ಮಾಯಸಂದ್ರ ಗ್ರಾಮದಲ್ಲಿ ಸಾಗಿದ್ದು, ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಅವರು ರಾಹುಲ್ ಅವರೊಂದಿಗೆ ಹೆಜ್ಜೆ ಹಾಕಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.ರಾಹುಲ್ ಗಾಂಧಿ ಜನಸಾಮಾನ್ಯರು ಹಾಗೂ ಅವರ ಸಮಸ್ಯೆ ಬಗ್ಗೆ ಹೆಚ್ಚು ಚಿಂತಿತರಾಗಿದ್ದು, ನಿರುದ್ಯೋಗ, ಬೆಲೆ ಏರಿಕೆ, ರೈತರ ಸಂಕಷ್ಟ, ಸಾಮಾಜಿಕ ಸಾಮರಸ್ಯದ ಬಗ್ಗೆ ಧ್ವನಿಯಾಗಿದ್ದಾರೆ. ಆರ್ಥಿಕ, ಸಾಮಾಜಿಕ ಅಸಮಾನತೆ, ರಾಜಕೀಯ ದ್ವೇಷದ ವಿಚಾರವಾಗಿ ಈ ಯಾತ್ರೆ ಮಾಡಲಾಗುತ್ತಿದೆ. ದೇಶದ ರಾಜಕೀಯ ಇತಿಹಾಸದಲ್ಲಿ ಈ ಯಾತ್ರೆ ಒಂದು ತಿರುವು ನೀಡಲಿದೆ ಎಂದು ದೀಪಕ್ ಕೋಟ್ಯಾನ್ ಹೇಳಿದರು.
ನಿರೀಕ್ಷೆ ಮೀರಿ ಲಕ್ಷಾಂತರ ಜನ ಈ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಚ್ಚರಿಯ ವಿಷಯ ಎಂದರೆ, ರಾಹುಲ್ ಗಾಂಧಿ ಜೊತೆಗೆ ಜನ ಸಾಮಾನ್ಯರೂ ಕುಟುಂಬ ಸಮೇತವಾಗಿ ಮಕ್ಕಳಿಂದ ವೃದ್ಧರವರೆಗೂ ಉತ್ಸುಕತೆಯಿಂದ ಹೆಜ್ಜೆ ಹಾಕುತ್ತಿದ್ದಾರೆ. ಇದು ಯಾತ್ರೆಯನ್ನು ಜನ ಒಪ್ಪಿರುವುದಕ್ಕೆ ಸಾಕ್ಷಿ. ಪಾದಯಾತ್ರೆಯಲ್ಲಿ ಭಾಗವಹಿಸದವರು ಕೂಡ ಶುಭ ಕೋರಿ ಬೆಂಬಲಿಸುತ್ತಿದ್ದಾರೆ.
ಬಿಜೆಪಿಯವರು ಕ್ಷುಲ್ಲಕ ಕಾರಣಕ್ಕೆ ಟೀಕೆ ಮಾಡುತ್ತಿರುವುದು ರಾಹುಲ್ ಗಾಂಧಿಯವರ ಬಗ್ಗೆ ಬಿಜೆಪಿಯವರಿಗೆ ಇರುವ ಭಯದ ಕಾರಣದಿಂದ. ರಾಹುಲ್ ಅವರು ಯಾವ ಟಿ ಶರ್ಟ್, ಚಡ್ಡಿ ಹಾಕಿದರೆ ಬಿಜೆಪಿ ಅವರಿಗೆ ಸಮಸ್ಯೆ ಏನು? ಅವರು ಈ ಯಾತ್ರೆಗೆ ಅಡ್ಡಿ ಪಡಿಸಲು ಪ್ರಯತ್ನಿಸುತ್ತಿದ್ದು, ಈ ಯಾತ್ರೆ ಜನರ ಮನಸ್ಸಿನಲ್ಲಿ ಯಶಸ್ವಿಯಾಗಿ ಮುಟ್ಟಿದೆ. ದಿನೇ ದಿನೆ ಯಾತ್ರೆಯಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾಗುತ್ತಿದೆ ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…