ಉಡುಪಿ: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಮಹೇಶ್ ಶೇಖರ ಪದ್ದು ಬಂಗೇರ ಕೋವಿಡ್ಗೆ ಬಲಿಯಾಗಿದ್ದಾರೆ.
ಎಂಬತ್ತರ ದಶಕದಲ್ಲಿ ದೇಶದ ಫುಟ್ಬಾಲ್ ತಂಡವನ್ನು ಮುನ್ನಡೆಸಿದ್ದ ಉಡುಪಿ ಮೂಲದ ಶೇಖರ್ ಪದ್ದು ಬಂಗೇರ ಅವರಿಗೆ 74 ವರ್ಷ ವಯಸ್ಸಾಗಿತ್ತು. ಚಿಕ್ಕಂದಿನಲ್ಲೇ ಉಡುಪಿಯಿಂದ ಮುಂಬೈಗೆ ತೆರಳಿ ಅವರು ಜೀವನ ರೂಪಿಸಿಕೊಂಡಿದ್ದರು.
ಭಾರತ ತಂಡದ ಗೋಲ್ ಕೀಪರ್ ಹಾಗೂ ಕ್ಯಾಪ್ಟನ್ ಕೂಡ ಆಗಿದ್ದ ಶೇಖರ್, ಮೂಲತಃ ಉಡುಪಿಯ ಬಡಾನಿಡಿಯೂರಿನವರು. ಶೇಖರ್ ಬಹುಕಾಲ ಮುಂಬೈಯಲ್ಲೇ ವಾಸವಾಗಿದ್ದರು. ಹಲವು ಪ್ರತಿಷ್ಠಿತ ಕ್ಲಬ್-ಸಂಸ್ಥೆಗಳಲ್ಲಿ ಕೋಚ್ ಆಗಿ ಸೇವೆ ಸಲ್ಲಿಸಿದ್ದು, ಈಗಲೂ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದರು.
ಮುಂಬೈನಲ್ಲಿ ಇದ್ದಾಗಲೇ ಶೇಖರ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಕೆಲ ತಿಂಗಳ ಹಿಂದೆ ಮುಂಬೈನಿಂದ ಉಡುಪಿಗೆ ಆಗಮಿಸಿದ್ದರು. ಬಳಿಕ ಇಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಖರ್ ಮೃತಪಟ್ಟಿದ್ದಾರೆ. ಉಡುಪಿಯ ನಗರದ ಮದರ್ ಆಫ್ ಸಾರೋಸ್ ಚರ್ಚ್ ನಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ವಿಧಿವತ್ತಾಗಿ ಅಂತಿಮ ಸಂಸ್ಕಾರ ಪ್ರಕ್ರಿಯೆ ನಡೆಯಿತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…