Featured

ಉಡುಪಿ: ಭಾರಿ ಮಳೆ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ – vishwanews24

ಉಡುಪಿ: ಭಾರಿ ಮಳೆ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.

ಆದ್ದರಿಂದ ಜಿಲ್ಲೆಯಲ್ಲಿ ಜೂನ್ 3 ರಿಂದ ಜೂನ್ 8 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡAತೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಹಾಗೂ ಸಿಡಿಲಿನ ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿರಬೇಕು.
ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ತುರ್ತು ಸೇವೆಗೆ ಶುಲ್ಕರಹಿತ ಸಂಖ್ಯೆ : 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ
ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago