Featured

ಉಡುಪಿ: ಭಾರಿ ಮಳೆ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ – vishwanews24

ಉಡುಪಿ: ಭಾರಿ ಮಳೆ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.

ಆದ್ದರಿಂದ ಜಿಲ್ಲೆಯಲ್ಲಿ ಜೂನ್ 3 ರಿಂದ ಜೂನ್ 8 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡAತೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಹಾಗೂ ಸಿಡಿಲಿನ ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿರಬೇಕು.
ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ತುರ್ತು ಸೇವೆಗೆ ಶುಲ್ಕರಹಿತ ಸಂಖ್ಯೆ : 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ
ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago