Featured

ಉಡುಪಿ ಭಾಷಣ ವಿವಾದ : ತಮ್ಮ ಮತಾಂತರ ಹೇಳಿಕೆ ವಾಪಾಸ್ ಪಡೆದ ಸಂಸದ ತೇಜಸ್ವಿ ಸೂರ್ಯ – Vishwanews24

ಉಡುಪಿ ಭಾಷಣ ವಿವಾದ : ತಮ್ಮ ಮತಾಂತರ ಹೇಳಿಕೆ ವಾಪಾಸ್ ಪಡೆದ ಸಂಸದ ತೇಜಸ್ವಿ ಸೂರ್ಯ – Vishwanews24

ಬೆಂಗಳೂರು: ಉಡುಪಿ ಮಾಡಿದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.

ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.

ಉಡುಪಿ ಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೆ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದರು. ಸಂಸದರ ಈ ಹೇಳಿಕೆಗಳು ವಿವಾದವನ್ನು ಸೃಷ್ಟಿಸಿತ್ತು. ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

2 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

2 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

2 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

2 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

6 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

6 hours ago