ಬೆಂಗಳೂರು: ಉಡುಪಿ ಮಾಡಿದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.
ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೆ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದರು. ಸಂಸದರ ಈ ಹೇಳಿಕೆಗಳು ವಿವಾದವನ್ನು ಸೃಷ್ಟಿಸಿತ್ತು. ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…