ಉಡುಪಿ,: ಇಂದ್ರಾಳಿಯ ಅನಿವಾಸಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಅಪರಾಧಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ ಭಟ್ ಎಂಬಾತನಿಗೆ ಜೂ.8 ರ ಮಂಗಳವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ರಾಜೇಶ್ವರಿ ಪುತ್ರ ನವನೀತ್ ಶೆಟ್ಟಿ, ಗೆಳೆಯ ನಿರಂಜನ್ ಭಟ್ ಈಗಾಗಲೇ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಸಹಿತ ಬಿಗು ಭದ್ರತೆಯಲ್ಲಿ ರಾಜೇಶ್ವರಿ ಶೆಟ್ಟಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು, ಪರಪ್ಪನ ಅಗ್ರಹಾರಕ್ಕೆ ಹಸ್ತಾಂತರಿಸಲಾಗಿದೆ.
14 ದಿನಗಳ ಕ್ವಾರಂಟೈನ್
ಜಿಲ್ಲಾ ನ್ಯಾಯಾಲಯದ ತೀರ್ಪಿನ ಬಳಿಕ ರಾಜೇಶ್ವರಿ ಶೆಟ್ಟಿಯನ್ನು ಕರೆದು ಕೊಂಡು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ಆ ಬಳಿಕ ಮಣಿಪಾಲ ಪೊಲೀಸರು, ಮಹಿಳಾ ಠಾಣೆಯ ಎಸ್ ಐ, ಸಶಸ್ತ್ರ ಹೊಂದಿರುವ ಸಿಬಂದಿ ಜತೆ ಜಿಲ್ಲಾ ಸಶಸ್ತ್ರ ವಾಹನದಲ್ಲಿ ರಾಜೇಶ್ವರಿ ಶೆಟ್ಟಿಯನ್ನು ಕರೆದುಕೊಂಡು ಹೋಗಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದ್ದು, ಜೈಲರ್ ಅವರಿಗೆ ಹಸ್ತಾಂತರಿಸಲಾಗಿದೆ. ಜೈಲಿನಲ್ಲಿರುವ ಪ್ರತ್ಯೇಕ ಸೆಲ್ ನಲ್ಲಿ 14 ದಿನಗಳ ಕ್ವಾರಂಟೈನ್ ಮುಗಿಸಿ ಶಿಕ್ಷೆಯಾಗಿರುವ ಸೆಲ್ ನಲ್ಲಿ ಹಾಕಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…