ಉಡುಪಿ

ಉಡುಪಿ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳ ವಿರುದ್ದ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನೆ -Vishwanews24

ಉಡುಪಿ: ರಾಜ್ಯ ಸರಕಾರ ಈಗಾಗಲೇ ತಿದ್ದುಪಡಿ ತಂದಿರುವ ಭೂ ಸುಧಾರಣಾ, ಎಪಿ ಎಂ ಸಿ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರು ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕ. ಸಣ್ಣ, ಮಧ್ಯಮ ವರ್ಗದ ರೈತರಿಗೆ ಅನ್ಯಾಯವಾಗುತ್ತಿದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಅನಾನುಕೂಲವೇ ಹೆಚ್ಚು ಎಂದರು.

ಸರ್ಕಾರ ತಂದಿರುವ ಮೂರು ಕಾಯ್ದೆಗಳಿಗೆ ನಮ್ಮ ಸಮ್ಮತಿ ಇಲ್ಲ. ಈ ಕಾಯಿದೆಗಳನ್ನು ಸುಗ್ರಿವಾಜ್ಞೆ ಮೂಲಕ ಅನುಷ್ಠಾನಕ್ಕೆ ತಂದಿದ್ದಾರೆ. ಇದನ್ನ ನಾವು ವಿರೋಧಿಸುತ್ತೇವೆ.

ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ , ಸಣ್ಣ , ಮಧ್ಯಮ ವರ್ಗದ ರೈತರಿಗೆ ಇದರಿಂದ ಅನ್ಯಾಯವಾಗುತ್ತದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಜನತೆಗೆ ಅನಾನುಕೂಲವೇ ಹೆಚ್ಚು ಎಂದು ಹೇಳಿದರು.

ಬಳಿಕ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮನವಿಯನ್ನು ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಜೆ ಡಿಎಸ್ ನಾಯಕರಾದ ಶ್ರೀಕಾಂತ್ ಅಡಿಗ, ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ , ಬಿ.ಟಿ ಮಂಜುನಾಥ, ರಂಜಿತ್ ಬೈಂದೂರು, ಕಿಶೋರ್ ಕುಂದಾಪುರ, ರಾಜು ದೇವಾಡಿಗ , ಪ್ರಕಾಶ್ ಶೆಟ್ಟಿ ಬೆಳ್ಳಂಪಳ್ಳಿ , ರವಿರಾಜ್ ಸಾಲಿಯಾನ್, ಶ್ರೀಕಾಂತ್ ಹೆಬ್ರಿ, ಎಸ್ ಪಿ ಬರ್ಬೋಜಾ, ಅಬ್ದುಲ್ ಹಮೀದ್ ಯೂಸೂಫ್, ರಮೇಶ್ ಕುಂದಾಪುರ, ಮಾರುತಿ ಮೊಗೇರ, ಶಂಶುದ್ದೀನ್ ಮಜೂರು, ವಾಲ್ಟರ್ ಬಾರ್ಕೂರು , ರಶೀದ್ ಯು.ಎ, ಪ್ರಶಾಂತ್ ಭಂಡಾರಿ, ಪ್ರಶಾಂತ್ ಸಾಲಿಯಾನ್, ಮಹಮ್ಮದ್ ಹ್ಯಾರಿಸ್, ಸನವರ, ಸಂಪತ್, ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು..

 

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago