ಉಡುಪಿ: ರಾಜ್ಯ ಸರಕಾರ ಈಗಾಗಲೇ ತಿದ್ದುಪಡಿ ತಂದಿರುವ ಭೂ ಸುಧಾರಣಾ, ಎಪಿ ಎಂ ಸಿ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರು ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕ. ಸಣ್ಣ, ಮಧ್ಯಮ ವರ್ಗದ ರೈತರಿಗೆ ಅನ್ಯಾಯವಾಗುತ್ತಿದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಅನಾನುಕೂಲವೇ ಹೆಚ್ಚು ಎಂದರು.
ಸರ್ಕಾರ ತಂದಿರುವ ಮೂರು ಕಾಯ್ದೆಗಳಿಗೆ ನಮ್ಮ ಸಮ್ಮತಿ ಇಲ್ಲ. ಈ ಕಾಯಿದೆಗಳನ್ನು ಸುಗ್ರಿವಾಜ್ಞೆ ಮೂಲಕ ಅನುಷ್ಠಾನಕ್ಕೆ ತಂದಿದ್ದಾರೆ. ಇದನ್ನ ನಾವು ವಿರೋಧಿಸುತ್ತೇವೆ.
ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ , ಸಣ್ಣ , ಮಧ್ಯಮ ವರ್ಗದ ರೈತರಿಗೆ ಇದರಿಂದ ಅನ್ಯಾಯವಾಗುತ್ತದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಜನತೆಗೆ ಅನಾನುಕೂಲವೇ ಹೆಚ್ಚು ಎಂದು ಹೇಳಿದರು.
ಬಳಿಕ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮನವಿಯನ್ನು ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಜೆ ಡಿಎಸ್ ನಾಯಕರಾದ ಶ್ರೀಕಾಂತ್ ಅಡಿಗ, ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ , ಬಿ.ಟಿ ಮಂಜುನಾಥ, ರಂಜಿತ್ ಬೈಂದೂರು, ಕಿಶೋರ್ ಕುಂದಾಪುರ, ರಾಜು ದೇವಾಡಿಗ , ಪ್ರಕಾಶ್ ಶೆಟ್ಟಿ ಬೆಳ್ಳಂಪಳ್ಳಿ , ರವಿರಾಜ್ ಸಾಲಿಯಾನ್, ಶ್ರೀಕಾಂತ್ ಹೆಬ್ರಿ, ಎಸ್ ಪಿ ಬರ್ಬೋಜಾ, ಅಬ್ದುಲ್ ಹಮೀದ್ ಯೂಸೂಫ್, ರಮೇಶ್ ಕುಂದಾಪುರ, ಮಾರುತಿ ಮೊಗೇರ, ಶಂಶುದ್ದೀನ್ ಮಜೂರು, ವಾಲ್ಟರ್ ಬಾರ್ಕೂರು , ರಶೀದ್ ಯು.ಎ, ಪ್ರಶಾಂತ್ ಭಂಡಾರಿ, ಪ್ರಶಾಂತ್ ಸಾಲಿಯಾನ್, ಮಹಮ್ಮದ್ ಹ್ಯಾರಿಸ್, ಸನವರ, ಸಂಪತ್, ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು..
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…