ಉಡುಪಿ : ದೇಶದ ಆರ್ಥಿಕ,ಸಾಮಾಜಿಕ ಸೇರಿದಂತೆ ಎಲ್ಲಾ ಅಭಿವೃದ್ದಿಗೆ ಭ್ರಷ್ಠಾಚಾರವು ಪ್ರಮುಖ ಅಡಚಣೆಯಾಗಿದ್ದು, ಇದರ ನಿರ್ಮೂಲನೆಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಲಿದ್ದು, ಇದರ ನಿರ್ಮೂಲನೆಗೆ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಉಡುಪಿ ಮತ್ತು ದ.ಕನ್ನಡ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಎ ಹೇಳಿದರು.
ಅವರು ಇಂದು ಉಡುಪಿಯ ಅಬಕಾರಿ ಭವನದಲ್ಲಿ, ಜಾಗೃತ ಅರಿವು ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಕಚೇರಿಗಳಲ್ಲಿ ,ಸಮಾಜದಲ್ಲಿ ಭ್ರಷ್ಠಾಚಾರ ಆಳವಾಗಿ ಬೇರೂರಿದ್ದು, ಕೆಟ್ಟ ಪಿಡುಗು ಆಗಿದೆ. ಇದನ್ನು ನಿರ್ಮೂಲನೆ ಮಾಡಲು ಎಲ್ಲಾ ನಾಗರೀಕರು,ಸರ್ಕಾರಿ ನೌಕರರು ಒಟ್ಟಾಗಿ ಕೆಲಸ ಮಾಡಬೇಕಿದೆ, ನೌಕರರು ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬಕ್ಕೆ ಆಸ್ಪದ ನೀಡದೇ , ಸಕಾಲದಲ್ಲಿ , ಪ್ರಾಮಾಣಿಕವಾಗಿ ಮಾಡಿಕೊಡಬೇಕು, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ಮುಂದಿನ ಪೀಳಿಗೆಗೆ ಸ್ಪೂರ್ತಿ ಮತ್ತು ಆದರ್ಶಪ್ರಾಯವಾಗಬೇಕು. ಭ್ರಷ್ಠಾಚಾರ ಪ್ರಕರಣಗಳಲ್ಲಿ ಸಿಲುಕಿದರೆ ಮಾನಸಿಕ ಮತ್ತು ದೈಹಿಕ ಖಿನ್ನತೆ ಅನುಭವಿಸಬೇಕಾಗುತ್ತದೆ. ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಲೋಕಾಯುಕ್ತ ಸಂಸ್ಥೆಯೊAದಿಗೆ ಸಮಾಜದ ಎಲ್ಲರೂ ಕೈ ಜೋಡಿಸ ಬೇಕು ಎಂದರು.
ಕಾರ್ಯಕ್ರಮದಲ್ಲಿ ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣದ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.
ಉಡುಪಿ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕ ಜಗದೀಶ್ ಮಾತನಾಡಿ, ಎಲ್ಲಾ ಕಚೇರಿಗಳಲ್ಲಿ ಭ್ರಷ್ಠಾಚಾರ ಜಾಗೃತಿಯು ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ , ವರ್ಷ ಪೂರ್ತಿ ಜಾಗೃತಿ ಮೂಡಬೇಕು, ನೌಕರರು ಸಾರ್ವಜನಿಕರಿಂದ ದೂರುಗಳು ಬಾರದಂತೆ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದರು.
ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತೆ ರೂಪಾ, ಉಡುಪಿ ಲೋಕಾಯುಕ್ತದ ಪೊಲೀಸ್ ನಿರೀಕ್ಷಕ ಜಯರಾಮ ಗೌಡ ಉಪಸ್ಥಿತರಿದ್ದರು. ಅಬಕಾರಿ ನಿರೀಕ್ಷಕಿ ಶುಭದಾ ಸಿ ನಾಯಕ್ ಸ್ವಾಗತಿಸಿದರು, ಉಪ ನಿರೀಕ್ಷಕ ಶಿವಶಂಕರ್ ನಿರೂಪಿಸಿ ,ವಂದಿಸಿದರು.
ಕಾರ್ಯಕ್ರಮದಲ್ಲಿ ಅಬಕಾರಿ ,ಅರಣ್ಯ, ಉಡುಪಿ ತಾ.ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…