ಉಡುಪಿ : ದೇಶದ ಆರ್ಥಿಕ,ಸಾಮಾಜಿಕ ಸೇರಿದಂತೆ ಎಲ್ಲಾ ಅಭಿವೃದ್ದಿಗೆ ಭ್ರಷ್ಠಾಚಾರವು ಪ್ರಮುಖ ಅಡಚಣೆಯಾಗಿದ್ದು, ಇದರ ನಿರ್ಮೂಲನೆಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಲಿದ್ದು, ಇದರ ನಿರ್ಮೂಲನೆಗೆ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಉಡುಪಿ ಮತ್ತು ದ.ಕನ್ನಡ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಎ ಹೇಳಿದರು.
ಅವರು ಇಂದು ಉಡುಪಿಯ ಅಬಕಾರಿ ಭವನದಲ್ಲಿ, ಜಾಗೃತ ಅರಿವು ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಕಚೇರಿಗಳಲ್ಲಿ ,ಸಮಾಜದಲ್ಲಿ ಭ್ರಷ್ಠಾಚಾರ ಆಳವಾಗಿ ಬೇರೂರಿದ್ದು, ಕೆಟ್ಟ ಪಿಡುಗು ಆಗಿದೆ. ಇದನ್ನು ನಿರ್ಮೂಲನೆ ಮಾಡಲು ಎಲ್ಲಾ ನಾಗರೀಕರು,ಸರ್ಕಾರಿ ನೌಕರರು ಒಟ್ಟಾಗಿ ಕೆಲಸ ಮಾಡಬೇಕಿದೆ, ನೌಕರರು ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬಕ್ಕೆ ಆಸ್ಪದ ನೀಡದೇ , ಸಕಾಲದಲ್ಲಿ , ಪ್ರಾಮಾಣಿಕವಾಗಿ ಮಾಡಿಕೊಡಬೇಕು, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ಮುಂದಿನ ಪೀಳಿಗೆಗೆ ಸ್ಪೂರ್ತಿ ಮತ್ತು ಆದರ್ಶಪ್ರಾಯವಾಗಬೇಕು. ಭ್ರಷ್ಠಾಚಾರ ಪ್ರಕರಣಗಳಲ್ಲಿ ಸಿಲುಕಿದರೆ ಮಾನಸಿಕ ಮತ್ತು ದೈಹಿಕ ಖಿನ್ನತೆ ಅನುಭವಿಸಬೇಕಾಗುತ್ತದೆ. ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಲೋಕಾಯುಕ್ತ ಸಂಸ್ಥೆಯೊAದಿಗೆ ಸಮಾಜದ ಎಲ್ಲರೂ ಕೈ ಜೋಡಿಸ ಬೇಕು ಎಂದರು.
ಕಾರ್ಯಕ್ರಮದಲ್ಲಿ ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣದ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.
ಉಡುಪಿ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕ ಜಗದೀಶ್ ಮಾತನಾಡಿ, ಎಲ್ಲಾ ಕಚೇರಿಗಳಲ್ಲಿ ಭ್ರಷ್ಠಾಚಾರ ಜಾಗೃತಿಯು ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ , ವರ್ಷ ಪೂರ್ತಿ ಜಾಗೃತಿ ಮೂಡಬೇಕು, ನೌಕರರು ಸಾರ್ವಜನಿಕರಿಂದ ದೂರುಗಳು ಬಾರದಂತೆ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದರು.
ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತೆ ರೂಪಾ, ಉಡುಪಿ ಲೋಕಾಯುಕ್ತದ ಪೊಲೀಸ್ ನಿರೀಕ್ಷಕ ಜಯರಾಮ ಗೌಡ ಉಪಸ್ಥಿತರಿದ್ದರು. ಅಬಕಾರಿ ನಿರೀಕ್ಷಕಿ ಶುಭದಾ ಸಿ ನಾಯಕ್ ಸ್ವಾಗತಿಸಿದರು, ಉಪ ನಿರೀಕ್ಷಕ ಶಿವಶಂಕರ್ ನಿರೂಪಿಸಿ ,ವಂದಿಸಿದರು.
ಕಾರ್ಯಕ್ರಮದಲ್ಲಿ ಅಬಕಾರಿ ,ಅರಣ್ಯ, ಉಡುಪಿ ತಾ.ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…