ಪಡುಬಿದ್ರೆ, : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಬರುವ ಎಲ್ಲಾ ಘನ ವಾಹನಗಳ ಸಂಚಾರದಲ್ಲಿ ಮಾರ್ಪಾಟು ಮಾಡಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆ ಸಂಚರಿಸುವ ಘನ ವಾಹನಗಳನ್ನು ಪಡುಬಿದ್ರೆಯಲ್ಲಿ ತಡೆಯುವ ಪೊಲೀಸರು ಕಾರ್ಕಳ-ಮೂಡುಬಿದಿರೆ ರಸ್ತೆಯ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡುತ್ತಿದ್ದಾರೆ.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕೆಲವೊಂದು ವಾಹನಗಳ ಚಾಲಕರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವುದು ಕಂಡುಬರುತ್ತಿದೆ.
ಇದನ್ನೂ ಓದಿ: ಮುರುಘಾ ಶ್ರೀ ಪ್ರಕರಣ : ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಬಂಧನ – Vishwanews24
ಈ ರೀತಿ ಸುತ್ತು ಬಳಸಿ ಕೆಲವು ಘನ ವಾಹನ ಸವಾರರು ನಿರಾಕರಿಸಿದ್ದು, ಕಾರ್ಕಳ ರಸ್ತೆಯ ಇಕ್ಕೆಲಗಳಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿದ್ದಾರೆ. ಸಂಜೆ ಮತ್ತೆ ವಾಹನ ಸಂಚಾರ ಯಥಾಸ್ಥಿತಿಗೆ ಬಂದ ಬಳಿಕ ರಾ.ಹೆ.66ರಲ್ಲಿ ಸಂಚಾರ ನಡೆಸುವುದಾಗಿ ಹೇಳುತ್ತಿದ್ದಾರೆ.
ಪಡುಬಿದ್ರೆ ಪಿಎಸ್ಸೈ ಪ್ರಕಾಶ್, ಸಾಲ್ಯಾನ್ ದಿವಾಕರ್, ಹರೀಶ್, ರಾಜೇಶ್, ಹೈವೇ ಪೆಟ್ರೋಲ್ ಮತ್ತು ಗೃಹರಕ್ಷಕ ಸಿಬ್ಬಂದಿ ಹೆದ್ದಾರಿಯಲ್ಲಿ ಬಂದೋಬಸ್ತ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರು : ಮೋದಿ ಸಮಾವೇಶಕ್ಕೆ ಗೋಲ್ಡ್ ಫಿಂಚ್ ಮೈದಾನಕ್ಕೆ ಆಗಮಿಸುತ್ತಿರುವ ಜನಸಾಗರ – Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…