ಉಡುಪಿ : ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಉಡುಪಿಯ ಶಾಸಕ ರಘುಪತಿ ಭಟ್ ಬೆಂಬಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಟ್ಟ ಕೂಡಲೇ ಮೊಟ್ಟೆಯನ್ನು ತಿನ್ನಲೇಬೇಕು ಎಂದೆನಿಲ್ಲ,ಕೊಟ್ಟರೆ ತಪ್ಪು ಎಂದು ನನಗೆ ಅನಿಸುವುದಿಲ್ಲ. ಸಣ್ಣ ಪ್ರಾಯಾದಲ್ಲಿ ಮಕ್ಕಳು ಸಸ್ಯಹಾರಿ ಇದ್ದರೆ ಸಸ್ಯಹಾರಿಯಾಗಿಯೇ ಇರುತ್ತಾರೆ. ಆದರೆ ಬೆಳೆದು ದೊಡ್ಡವರಾದ ಮೇಲೆ ಅವರು ಬದಲಾಗುವುದು ಉಂಟು . ಮೊಟ್ಟೆಯನ್ನು ಮಕ್ಕಳಿಗೆ ವಿತರಿಸುವ ಸಂದರ್ಭದಲ್ಲಿ ಪ್ರತ್ಯೇಕವಾಗಿ ಕೊಡುವ ವ್ಯವಸ್ಥೆ ಮಾಡಬಹುದು.ಕೆಲವೊಮ್ಮೆ ಸಸ್ಯಹಾರಿ ಮಕ್ಕಳಿಗೆ ಮೊಟ್ಟೆ ತಿನ್ನುವುದನ್ನು ನೋಡುವಾಗ ಬೇರೆ ತೆರನಾದ ಭಾವನೆಗಳು ಬರಬಹುದು. ಹೀಗಾಗಿ ಇದಕ್ಕೆ ಶಾಲೆಯಲ್ಲಿ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಮೊಟ್ಟೆ ಕೊಡದೇ ಇರುವುದು ಸೂಕ್ತವಾದ ನಿರ್ಧಾರವಲ್ಲ.ಇತರ ಮಕ್ಕಳು ಮೊಟ್ಟೆ ತಿನ್ನುವುದನ್ನು ನೋಡಿ ಮಕ್ಕಳು ಪ್ರಭಾವಿತರಾಗುವುದು ಇಲ್ಲ. ಹೀಗಾಗಿ ಮಕ್ಕಳಿಗೆ ಮೊಟ್ಟೆ ನೀಡುವುದು ಸೂಕ್ತ ಎಂದು ಸರ್ಕಾರದ ನಿರ್ಧಾರದ ಬಗ್ಗೆ ಶಾಸಕರು ಬೆಂಬಲ ವ್ಯಕ್ತಪಡಿಸಿದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…