Featured

ಉಡುಪಿ : ಮಕ್ಕಳ ದಿನಾಚರಣೆ – ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ :- Vishwanews24

ಮಕ್ಕಳ ದಿನಾಚರಣೆ : ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ

ಉಡುಪಿ : ಮಾನವ ಬಂಧುತ್ವ ವೇದಿಕೆ ಕರ್ನಾಟಕ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇವರ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಚಿತ್ರ (ಡ್ರಾಯಿಂಗ್) ಬಿಡಿಸುವ ಇದೇ ನವೆಂಬರ್ 13 ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಉದ್ಯಾವರ ಝೇವಿಯರ್ ಸಭಾಭವನದಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

3 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಒಂದರಿಂದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಗೆ ‘ಪರಿಸರ’, ಐದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ‘ಸಂಭ್ರಮ’, ಎಂಟರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ‘ಮಕ್ಕಳು ಕಂಡಂತೆ ನೆಹರು’ ಎಂಬ ವಿಷಯಗಳ ಬಗ್ಗೆ ಡ್ರಾಯಿಂಗ್ ಸ್ಪರ್ಧೆ ನಡೆಯಲಿದೆ.

3 ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಮತ್ತು 3 ಸಮಾಧಾನಕರ ಬಹುಮಾನ ಮತ್ತು ನಗದು ನೀಡಲಾಗುತ್ತಿದ್ದು, ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುತ್ತದೆ. ಮಕ್ಕಳಿಗೆ ಬೆಳಗಿನ ಫಲಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧೆಯ ಅವಧಿ 2 ಗಂಟೆಗೆ ಮೀಸಲಾಗಿದ್ದು, ಸಂಘಟಕರು ಸ್ಪರ್ಧಿಗಳಿಗೆ ಡ್ರಾಯಿಂಗ್ ಹಾಳೆ ಮಾತ್ರ ವಿತರಿಸಲಿದ್ದಾರೆ. ಉಳಿದೆಲ್ಲ ಪರಿಕರಗಳನ್ನು ಸ್ಪರ್ಧಿಗಳೇ ತರತಕ್ಕದ್ದು. ಹೆಸರು ನೋಂದಾಯಿಸಲು ಸ್ಥಳದಲ್ಲಿ ಅವಕಾಶ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮಂಗಳೂರಿನಲ್ಲಿರುವ ಬಿಜೆಪಿ ನಾಯಕರಿಗೆ ಸೇರಿದ 11 ಬೀಫ್ ಫ್ಯಾಕ್ಟರಿಗಳನ್ನು ಬಂದ್ ಮಾಡಿಸಲು ಸರ್ಕಾರಕ್ಕೆ ತಾಕತ್ತಿದೆಯೇ: ಖಾದರ್ ಸವಾಲು – Vishwanews24

ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ರಾಜ್ಯ ಸಮಿತಿಯ ಸದಸ್ಯರಾಗಿರುವ ಉದ್ಯಮಿ ರೊನಾಲ್ಡ್ ಮನೋಹರ್ ಕರ್ಕಡ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸಂಚಲನಾ ಸಮಿತಿ ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಜೊತೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ವಿವಿಧ ಭಾಗದ ಮಕ್ಕಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಈಗಾಗಲೇ ಹಲವಾರು ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು ಸ್ಥಳದಲ್ಲಿಯೇ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಹೆಸರು ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಲ. ಸ್ಟೀವನ್ ಕುಲಾಸೊ 9901701381.

ಕೂದಲು ಉದುರುತ್ತಿದೆ ಎಂದು ಮನನೊಂದು ಡೆತ್‍ನೋಟ್ ಬರೆದು ಯುವಕ ಆತ್ಮಹತ್ಯೆ – Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

14 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

15 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

15 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

15 hours ago