Featured

ಉಡುಪಿ :ಮಗು ಅನಧಿಕೃತ ಮಾರಾಟ; ಮೂವರ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ :ಮಗು ಅನಧಿಕೃತ ಮಾರಾಟ; ತಂದೆ ತಾಯಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಉಡುಪಿ, : ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ತಂದೆ ತಾಯಿ ಸಹಿತ ಮೂವರ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು. 19ರಂದು ಆರೋಪಿಗಳಾದ ರಾಬಿಯಾ ಬಾನು ಮತ್ತು ಖಾಲಿದ್‌ ಸಯ್ಯದ್‌ ಅವರಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ಆ ಮಗು ಅವರ ವಶದಲ್ಲಿ ಇಲ್ಲದಿರುವ ಬಗ್ಗೆ ಆ. 6ರಂದು ಪೆರಂಪಳ್ಳಿಯ ಅಂಗನವಾಡಿ ಕಾರ್ಯಕರ್ತೆ ಸರಿತಾ ಡಿ’ಸೋಜಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಮಾಹಿತಿ ನೀಡಿದ್ದರು.

ಅನಂತರ ಮಕ್ಕಳ ರಕ್ಷಣ ಘಟಕದ ಸಾಮಾಜಿಕ ಕಾರ್ಯಕರ್ತರಾದ ಸುರಕ್ಷಾ, ಯೋಗೀಶ್‌ ಹಾಗೂ ಸರಿತಾ ಡಿ’ಸೋಜಾ ಅವರು ಪೆರಂಪಳ್ಳಿಯ ಶೀಂಬ್ರ ಭಟ್ರಕೋಡಿಯಲ್ಲಿರುವ ಆರೋಪಿಗಳ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಮನೆಗೆ ಬೀಗ ಹಾಕಲಾಗಿತ್ತು. ಖಾಲಿದ್‌ಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಮೊಬೈಲ್‌ ಸ್ವಿಚ್‌ ಆಫ್ ಆಗಿತ್ತು. ಈ ಬಗ್ಗೆ ಸುರಕ್ಷಾ ಅವರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಆ.7ರಂದು ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು.

ವಿಚಾರಣೆ ವೇಳೆ ಆರೋಪಿಗಳು ಮಗುವನ್ನು ಮೂಲ್ಕಿಯ ನಿವಾಸಿ ವಾಜಿದ್‌ ಅವರಿಗೆ ಕಾನೂನು ಬಾಹಿರವಾಗಿ ನೀಡಿರುವುದಾಗಿ ತಿಳಿಸಿದ್ದರು. ಬಳಿಕ ಮಹಿಳಾ ಪೊಲೀಸ್‌ ಠಾಣೆಯ ಉಪನಿರೀಕ್ಷಕರು ವಾಜಿದ್‌ನ ಬಗ್ಗೆ ವಿಚಾರಣೆ ಮಾಡಿ ಆತನನ್ನು ಠಾಣೆಗೆ ಬರುವಂತೆ ತಿಳಿಸಿದ್ದರು. ಆತ ಮಗುವಿನೊಂದಿಗೆ ಬಂದಿದ್ದು, ಮಗುವಿನ ಮಾರಾಟದ ಬಗ್ಗೆ ಸತ್ಯಾಸತ್ಯತೆ ತಿಳಿಯದೇ ಇದ್ದುದರಿಂದ ಪ್ರಕರಣ ದಾಖಲಿಸಲು ಸಾಧ್ಯವಾಗಿರಲಿಲ್ಲ.

ಪ್ರಸ್ತುತ ಸುರಕ್ಷಾ ಅವರ ದೂರಿನಂತೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬಾಲ ನ್ಯಾಯ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ಪ್ರಸ್ತುತ ತಾಯಿ-ಮಗುವನ್ನು ಸುರಕ್ಷತೆಯ ದೃಷ್ಟಿಯಿಂದ ಉಡುಪಿಯ ಸಖೀ ಒನ್‌ ಸ್ಟಾಪ್‌ ಸೆಂಟರ್‌ಗೆ ದಾಖಲಿಸಲಾಗಿದೆ. ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

17 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

17 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago