ಉಡುಪಿ, : ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ತಂದೆ ತಾಯಿ ಸಹಿತ ಮೂವರ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು. 19ರಂದು ಆರೋಪಿಗಳಾದ ರಾಬಿಯಾ ಬಾನು ಮತ್ತು ಖಾಲಿದ್ ಸಯ್ಯದ್ ಅವರಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ಆ ಮಗು ಅವರ ವಶದಲ್ಲಿ ಇಲ್ಲದಿರುವ ಬಗ್ಗೆ ಆ. 6ರಂದು ಪೆರಂಪಳ್ಳಿಯ ಅಂಗನವಾಡಿ ಕಾರ್ಯಕರ್ತೆ ಸರಿತಾ ಡಿ’ಸೋಜಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಮಾಹಿತಿ ನೀಡಿದ್ದರು.
ಅನಂತರ ಮಕ್ಕಳ ರಕ್ಷಣ ಘಟಕದ ಸಾಮಾಜಿಕ ಕಾರ್ಯಕರ್ತರಾದ ಸುರಕ್ಷಾ, ಯೋಗೀಶ್ ಹಾಗೂ ಸರಿತಾ ಡಿ’ಸೋಜಾ ಅವರು ಪೆರಂಪಳ್ಳಿಯ ಶೀಂಬ್ರ ಭಟ್ರಕೋಡಿಯಲ್ಲಿರುವ ಆರೋಪಿಗಳ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಮನೆಗೆ ಬೀಗ ಹಾಕಲಾಗಿತ್ತು. ಖಾಲಿದ್ಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಸುರಕ್ಷಾ ಅವರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆ.7ರಂದು ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು.
ವಿಚಾರಣೆ ವೇಳೆ ಆರೋಪಿಗಳು ಮಗುವನ್ನು ಮೂಲ್ಕಿಯ ನಿವಾಸಿ ವಾಜಿದ್ ಅವರಿಗೆ ಕಾನೂನು ಬಾಹಿರವಾಗಿ ನೀಡಿರುವುದಾಗಿ ತಿಳಿಸಿದ್ದರು. ಬಳಿಕ ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ವಾಜಿದ್ನ ಬಗ್ಗೆ ವಿಚಾರಣೆ ಮಾಡಿ ಆತನನ್ನು ಠಾಣೆಗೆ ಬರುವಂತೆ ತಿಳಿಸಿದ್ದರು. ಆತ ಮಗುವಿನೊಂದಿಗೆ ಬಂದಿದ್ದು, ಮಗುವಿನ ಮಾರಾಟದ ಬಗ್ಗೆ ಸತ್ಯಾಸತ್ಯತೆ ತಿಳಿಯದೇ ಇದ್ದುದರಿಂದ ಪ್ರಕರಣ ದಾಖಲಿಸಲು ಸಾಧ್ಯವಾಗಿರಲಿಲ್ಲ.
ಪ್ರಸ್ತುತ ಸುರಕ್ಷಾ ಅವರ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲ ನ್ಯಾಯ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ಪ್ರಸ್ತುತ ತಾಯಿ-ಮಗುವನ್ನು ಸುರಕ್ಷತೆಯ ದೃಷ್ಟಿಯಿಂದ ಉಡುಪಿಯ ಸಖೀ ಒನ್ ಸ್ಟಾಪ್ ಸೆಂಟರ್ಗೆ ದಾಖಲಿಸಲಾಗಿದೆ. ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…