ಉಡುಪಿ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾನವ ಸಂಪನ್ಮೂಲ ವಿಭಾಗದ ಚೀಫ್ ಮ್ಯಾನೇಜರ್ ಆಗಿರುವ ಸುರೇಶ್ ಶೆಣೈ ಅವರು ಪ್ರತಿಷ್ಟಿತ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ತಮ್ಮ ಸಾಧನೆಯನ್ನು ದಾಖಲಿಸಿದ್ದಾರೆ..
ಭಾರತದಲ್ಲಿ ಬಣ್ಣ ಬಳಸದೆ ಹಳೆಯ ಮ್ಯಾಗಜೀನ್ ಕಾಗದಗಳನ್ನು ಬಳಸಿ ತಯಾರಿಸುವ ಚಿತ್ರಗಾರಿಕೆಯಾಗಿರುವ (Collage Art- Painting without Paint) ಗರಿಷ್ಟ ಚಿತ್ರಗಾರಿಕೆ ಮಾಡಿರುವ ಬಗ್ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ.
ಸಾಧನೆಗಾಗಿ ಶೆಣೈ ಅವರು ಅವರ ಹೆತ್ತವರು ಅವರ ಪತ್ನಿ, ಅವರ ಪುತ್ರ, ಅವರ ಹಿರಿಯ ಸಹೋದರ ಗಣೇಶ್ ಶೆಣೈ, ಅವರ ಅತ್ತೆ ಹಾಗೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗೆ ಬೆಂಬಲಿಸಿ ಪ್ರೋತ್ಸಾಹ ನೀಡಿದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಬಣ್ಣ ಬಳಸದೆ ಹಳೆಯ ಮ್ಯಾಗಝೀನ್ ಕಾಗದಗಳ ಮೂಲಕ ಚಿತ್ರ ಸೃಷ್ಟಿಸುವ ಕಲೆಯನ್ನು ಅವರ ತಂದೆ ಹಿರಿಯ ಕಲಾವಿದರಾಗಿದ್ದ, ಇಂತಹ ಕಲೆಯಲ್ಲಿ ಪರಿಣಿತರಾಗಿದ್ದ ದಿ. ಕೆಪಿ ಶೆಣೈ ರವರೊಂದಿಗೆ ಸುಮಾರು 40 ವರ್ಷಗಳ ಹಿಂದೆ ಪ್ರಾರಂಭಿಸಿದ್ದರು.
ಈ ಚಿತ್ರ ಸೃಷ್ಟಿಸುವ ಚಿತ್ರಗಾರಿಕೆಯು ಮೂರು ಆಯಾಮಗಳುಳ್ಳ ಪ್ರಭಾವದಂತೆ ಗೋಚರಿಸುವ ಚಿತ್ರ ಕಲೆಯಾಗಿದ್ದು ಇದನ್ನು ಮತ್ತೊಮ್ಮೆ ಯಾರು ಕೂಡ ಕಾಪಿ ಮಾಡಲು ಸಾಧ್ಯವಿಲ್ಲ ಮತ್ತು ಇದನ್ನು ಮರುಸೃಷ್ಟಿಸಲು ಮೂಲ ಕಲಾವಿದನಿಂದಲೂ ಕೂಡ ಅಸಾಧ್ಯವಾಗಿರುತ್ತದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…