ಉಡುಪಿ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾನವ ಸಂಪನ್ಮೂಲ ವಿಭಾಗದ ಚೀಫ್ ಮ್ಯಾನೇಜರ್ ಆಗಿರುವ ಸುರೇಶ್ ಶೆಣೈ ಅವರು ಪ್ರತಿಷ್ಟಿತ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ತಮ್ಮ ಸಾಧನೆಯನ್ನು ದಾಖಲಿಸಿದ್ದಾರೆ..
ಭಾರತದಲ್ಲಿ ಬಣ್ಣ ಬಳಸದೆ ಹಳೆಯ ಮ್ಯಾಗಜೀನ್ ಕಾಗದಗಳನ್ನು ಬಳಸಿ ತಯಾರಿಸುವ ಚಿತ್ರಗಾರಿಕೆಯಾಗಿರುವ (Collage Art- Painting without Paint) ಗರಿಷ್ಟ ಚಿತ್ರಗಾರಿಕೆ ಮಾಡಿರುವ ಬಗ್ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ.
ಸಾಧನೆಗಾಗಿ ಶೆಣೈ ಅವರು ಅವರ ಹೆತ್ತವರು ಅವರ ಪತ್ನಿ, ಅವರ ಪುತ್ರ, ಅವರ ಹಿರಿಯ ಸಹೋದರ ಗಣೇಶ್ ಶೆಣೈ, ಅವರ ಅತ್ತೆ ಹಾಗೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗೆ ಬೆಂಬಲಿಸಿ ಪ್ರೋತ್ಸಾಹ ನೀಡಿದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಬಣ್ಣ ಬಳಸದೆ ಹಳೆಯ ಮ್ಯಾಗಝೀನ್ ಕಾಗದಗಳ ಮೂಲಕ ಚಿತ್ರ ಸೃಷ್ಟಿಸುವ ಕಲೆಯನ್ನು ಅವರ ತಂದೆ ಹಿರಿಯ ಕಲಾವಿದರಾಗಿದ್ದ, ಇಂತಹ ಕಲೆಯಲ್ಲಿ ಪರಿಣಿತರಾಗಿದ್ದ ದಿ. ಕೆಪಿ ಶೆಣೈ ರವರೊಂದಿಗೆ ಸುಮಾರು 40 ವರ್ಷಗಳ ಹಿಂದೆ ಪ್ರಾರಂಭಿಸಿದ್ದರು.
ಈ ಚಿತ್ರ ಸೃಷ್ಟಿಸುವ ಚಿತ್ರಗಾರಿಕೆಯು ಮೂರು ಆಯಾಮಗಳುಳ್ಳ ಪ್ರಭಾವದಂತೆ ಗೋಚರಿಸುವ ಚಿತ್ರ ಕಲೆಯಾಗಿದ್ದು ಇದನ್ನು ಮತ್ತೊಮ್ಮೆ ಯಾರು ಕೂಡ ಕಾಪಿ ಮಾಡಲು ಸಾಧ್ಯವಿಲ್ಲ ಮತ್ತು ಇದನ್ನು ಮರುಸೃಷ್ಟಿಸಲು ಮೂಲ ಕಲಾವಿದನಿಂದಲೂ ಕೂಡ ಅಸಾಧ್ಯವಾಗಿರುತ್ತದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…