ಉಡುಪಿ: ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ. ವನಜಾ ಪೂಜಾರ್ತಿ (60) ಕೊಲೆಯಾದ ಮಹಿಳೆ.
ಕೊಲೆ ಸಂಬಂಧ ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೋನ್ಸಾ ಮತ್ತು ಪುವೀಣ್ ಮೆಂಡೋನ್ಸಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಲೇರಿಯನ್ ಮೆಂಡೋನ್ಸಾ ಹಾಗೂ ಪುವೀಣ್ ಮೆಂಡೊನ್ಸಾ ಅವರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದು, ವನಜಾ ಪೂಜಾರ್ತಿಯವರೊಂದಿಗೆ ಆಗಾಗ್ಗೆ ಇವರಿಬ್ಬರು ಮದ್ಯಪಾನ ಮಾಡುತ್ತಿದ್ದರು.
ಇದನ್ನೂ ಓದಿ:👇
ಮಾರ್ಚ್ 9 ರಂದು ಸಂಜೆ 5 ಗಂಟೆಯಿಂದ ಮಾರ್ಚ್ 10 ರಂದು ಬೆಳಿಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ವಲೇರಿಯನ್ ಮೆಂಡೊನ್ಸಾ ಮತ್ತು ಪುವೀಣ್ ಮೆಂಡೋನ್ಸಾ ಅವರು ವನಜಾ ಪೂಜಾರ್ತಿಯನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2026 ಅಡಿಯಲ್ಲಿ ಕಲಂ 103 BNS ಪುಕಾರ ಪುಕರಣ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕೆಎಂಸಿ ಮಣಿಪಾಲದ ಪೊರೆನ್ಸಿಕ್ ವೈದ್ಯರು, ಸೀನ್ ಆಫ್ ಕ್ರೈಂ ಆಫೀಸರ್ (SOCO) ತಂಡ, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ:👇
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…