Featured

ಉಡುಪಿ: ಮಣ್ಣಪಳ್ಳ ಕೆರೆ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಲು ಯಶ್ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ಮಣ್ಣಪಳ್ಳ ಕೆರೆ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಲು ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ನಗರಸಭಾ ವ್ಯಾಪ್ತಿಯ ಮಣ್ಣಪಳ್ಳ ಸಮರ್ಪಕ ನಿರ್ವಹಣೆ ಇಲ್ಲದೆ ಸಮಸ್ಯೆಗಳ ಗೂಡಾಗಿದ್ದು ಈಗಾಗಲೇ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಣ್ಣಪಳ್ಳ ಕೆರೆಯನ್ನು ನಗರಸಭೆಗೆ ಹಸ್ತಾಂತರಿಸುವಂತೆ ನಿರ್ಣಯ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದು ಜಿಲ್ಲಾಡಳಿತ ತಕ್ಷಣ ಮಣ್ಣಪಳ್ಳ ಕೆರೆಯನ್ನು ನಗರಸಭೆಗೆ ಹಸ್ತಾಂತರಿಸಲು ಕ್ರಮ ವಹಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಮಣ್ಣಪಳ್ಳ ನಗರ ಭಾಗದ ಅತ್ಯಂತ ವಿಶಾಲವಾದ ಏಕೈಕ ಕೆರೆಯಾಗಿದ್ದು, ಪ್ರತಿದಿನ ನೂರಾರು ಮಂದಿ ವಾಯು ವಿಹಾರಕ್ಕೆ ಆಗಮಿಸುತ್ತಿದ್ದು, ಶುಚಿತ್ವ, ದಾರಿದೀಪ, ಕಳೆ ಗಿಡಗಳು ಹಾಗೂ ಭದ್ರತಾ ವ್ಯವಸ್ಥೆ ಕೊರತೆಯಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಜಿಲ್ಲಾಡಳಿತದ ಸುಪರ್ದಿಯಲ್ಲಿರುವ ಮಣ್ಣಪಳ್ಳ ಕೆರೆ ಸೂಕ್ತ ನಿರ್ವಹಣೆಯಿಲ್ಲದೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಣ್ಣಪಳ್ಳ ಕೆರೆ ಹಸ್ತಾಂತರಿಸುವಂತೆ ಕಳೆದ ವರ್ಷವೇ ಪತ್ರ ಬರೆದು ಮನವಿ ಮಾಡಿದರೂ ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಮಣ್ಣಪಳ್ಳ ಕೆರೆಯ ಹೂಳೆತ್ತಿ, ಸ್ವಚ್ಛಗೊಳಿಸಿದ್ದಲ್ಲಿ ಜಲ ವಿಹಾರ/ಕ್ರೀಡೆಗಳಿಗೆ ಅನುಕೂಲ ಆಗಲಿದೆ. ಕೆರೆಯ ಪಾರ್ಶ್ವದಲ್ಲಿ ಕಂಬಳ ಕ್ರೀಡೆಯನ್ನು ಪುನರಪಿ ಪ್ರಾರಂಭಿಸಲು ಅವಕಾಶ ಕಲ್ಪಿಸುವಂತೆ ಬೇಡಿಕೆಯಿದೆ. ಕೆರೆಯ ಸುತ್ತಲೂ ಸುಸಜ್ಜಿತ ವಾಕಿಂಗ್ ಟ್ರ್ಯಾಕ್, ಸೈಕ್ಲಿಂಗ್ ಟ್ರ್ಯಾಕ್, ನಿರ್ಮಿಸಿ ನಾಗರಿಕರಿಗೆ ಉತ್ತಮ ಸೌಲಭ್ಯ ಒದಗಿಸಬೇಕಾಗಿದೆ. ಬಯಲು ರಂಗಮದಿರ, ಕ್ರೀಡಾ ಕಟ್ಟಡ, ಶೌಚಾಲಯಗಳ ನಿರ್ಮಾಣ ಮತ್ತು ಸಮರ್ಪಕ ನಿರ್ವಹಣೆ ಆಗಬೇಕಾಗಿದೆ. ಬೇಸಿಗೆಯಲ್ಲಿ ಸ್ವರ್ಣ ನದಿಯಿಂದ ಪಂಪಿಂಗ್ ಮೂಲಕ ನೀರನ್ನು ಪೂರೈಸಿ, ಅಂತರ್ಜಲ ಹೆಚ್ಚಿಸುವ ಅವಕಾಶ ಇದೆ.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಣ್ಣಪಳ್ಳ ಕೆರೆಯೂ ಸೇರಿದಂತೆ ಕೆರೆಗಳ ನಿರ್ವಹಣೆಗೆ ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಮಣ್ಣಪಳ್ಳ ಕೆರೆಯನ್ನು ಉಡುಪಿ ನಗರಸಭೆಗೆ ಹಸ್ತಾಂತರಿಸಿಕೊಂಡು ನಗರಸಭೆ, ರಾಜ್ಯ ಸರಕಾರ, ಕೇಂದ್ರ ಸರಕಾರ ಹಾಗೂ ಮತ್ತಿತರ ಅನುದಾನಗಳನ್ನು ಒಗ್ಗೂಡಿಸಿಕೊಂಡು ಕೆರೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ವಿಫುಲ ಅವಕಾಶ ಇದ್ದು ನಗರಸಭೆಗೆ ಮಣ್ಣಪಳ್ಳ ಕೆರೆಯನ್ನು ಹಸ್ತಾಂತರಿಸಿದಲ್ಲಿ ಸಮಗ್ರ ಮತ್ತು ಜನ ಸ್ನೇಹಿ ಅಭಿವೃದ್ಧಿ ಮತ್ತು ನಿರ್ವಹಣೆ ಸಾಧ್ಯವಾಗಲಿದ್ದು, ಈ ಬಗ್ಗೆ ಶೀಘ್ರ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

43 minutes ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

3 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

3 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

3 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

3 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

3 hours ago