Featured

ಉಡುಪಿ: ಮತಾಂತರ ನಿಷೇಧ ಕಾಯಿದೆ ಬಿಜೆಪಿಯಿಂದ ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಮಾಡುವ ಕೆಲಸ : ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಡಿಯೋನ್‌ ಡಿʼಸೋಜಾ – Vishwanews24

ಉಡುಪಿ: ಮತಾಂತರ ನಿಷೇಧ ಕಾಯಿದೆ ಬಿಜೆಪಿಯಿಂದ ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಮಾಡುವ ಕೆಲಸ : ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಡಿಯೋನ್‌ ಡಿʼಸೋಜಾ – Vishwanews24

ಉಡುಪಿ: ಆಡಳಿತಾರೂಢ ಬಿಜೆಪಿ ಸರಕಾರ ಮಂಡಿಸಲು ನಿರ್ಧರಿಸುವ ಮತಾಂತರ ವಿರೋಧಿ ಮಸೂದೆ ಮತ್ತು ರಾಜ್ಯದಲ್ಲಿನ ಮಿಷನರಿಗಳ ಸಮೀಕ್ಷೆಯನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿಯೋನ್ ಡಿʼಸೋಜ ತೀವ್ರವಾಗಿ ಖಂಡಿಸಿದ್ದಾರೆ.

ರಾಜ್ಯದ ಬಿಜೆಪಿ ಸರಕಾರ ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ತಮ್ಮನ್ನು ತಾವು ಶ್ರೇಷ್ಠ ಎಂದು ಹೇಳಿಕೊಂಡು ಕ್ರೈಸ್ತರು ಬಲವಂತವಾಗಿ ಮತಾಂತರ ಮಾಡುತ್ತಾರೆ ಎಂದು ಸುಳ್ಳು ಮಾಹಿತಿ ನೀಡುವುದರ ಮೂಲಕ ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಮಾಡುವ ಕೆಲಸ ನಡೆಸುತ್ತಿದ್ದಾರೆ.

ಬಿಜೆಪಿ ಸರಕಾರ ತರಲು ಉದ್ದೇಶಿಸಿರುವ ಮತಾಂತರ ವಿರೋಧಿ ಕಾನೂನು ರಾಜಕೀಯ ಉದ್ದೇಶಗಳನ್ನು ಹೊಂದಿದ್ದು ಇದರಿಂದ ಸಮಾಜದಲ್ಲಿ ಸಾಮರಸ್ಯವನ್ನು ಕೆಡಿಸುವ ಹುನ್ನಾರವಾಗಿದೆ. ವಾಸ್ತವವಾಗಿ ಇಡೀ ಕ್ರೈಸ್ತ ಸಮುದಾಯ ಬಲವಂತದ ಧಾರ್ಮಿಕ ಮತಾಂತರದ ವಿರುದ್ದವಿದ್ದು ಆದರೆ, ಕೆಲವರು ಮಾಡಿದ ತಪ್ಪುಗಳಿಗಾಗಿ ಕ್ರಿಶ್ಚಿಯನ್ ಧರ್ಮ ಮತ್ತು ಇಡೀ ಕ್ರಿಶ್ಚಿಯನ್ ಸಮುದಾಯದ ಹೆಸರನ್ನು ಹಾಳು ಮಾಡುವುದು ಅತ್ಯಂತ ಖಂಡನೀಯ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಎಲ್ಲಿಯೂ ಕೂಡ ಮತಾಂತರ ನಡೆದಿಲ್ಲ ಬದಲಾಗಿ, ಕ್ರಿಶ್ಚಿಯನ್ ಸಮುದಾಯವು ಯಾವಾಗಲೂ ಯುವಜನರು ಮತ್ತು ಅದರ ಜನರ ನಡುವೆ ಅಭಿವೃದ್ಧಿ, ಉತ್ತಮ ನೈತಿಕತೆಯ ಬೋಧನೆಗಳು ಮತ್ತು ಜಾತ್ಯತೀತ ಜೀವನವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇತ್ತೀಚೆಗೆ ಆಡಳಿತ ಪಕ್ಷದ ಶಾಸಕರು ಮತ್ತು ಮುಖ್ಯಮಂತ್ರಿಗಳು ಮಾಡಿರುವ ಹೇಳಿಕೆಗಳು ಇಡೀ ಕ್ರೈಸ್ತ ಸಮುದಾಯಕ್ಕೆ ನೋವನ್ನು ಉಂಟು ಮಾಡಿದ್ದು ಇದೊಂದು ರೀತಿಯ ಒಡೆದು ಆಳುವ ರೀತಿಯಾಗಿದೆ.

ರಾಜ್ಯ ಸರಕಾರ ತರಲು ಹೊರಟಿರುವ ಮತಾಂತರ ವಿರೋಧಿ ಮಸೂದೆ ಮತ್ತು ಕರ್ನಾಟಕದ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆಯಿಂದ ಯೋಜಿಸಲಾಗುತ್ತಿರುವ ಸಮೀಕ್ಷೆಯನ್ನು ಒಳಗೊಂಡಂತೆ ಸರ್ಕಾರವು ಕೈಗೊಳ್ಳುತ್ತಿರುವ ವಿವಿಧ ಅನೈತಿಕ ನಡೆಗಳನ್ನು ಖಂಡಿಸುತ್ತಿದ್ದು, ಮುಗ್ಧರನ್ನು ಬೇಟೆಯಾಡಲು ಮತ್ತು ಹಿಂಸಿಸಲು ಕೆಲವರ ಕೈಯಲ್ಲಿ ರೂಪಿಸಲಾದ ಕಾನೂನುಗಳು ಸಾಧನವಾಗಲಾರವು ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago