ಉಡುಪಿ: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟ್ರೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ ಧರ್ಮೀಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾ ಹಿಂದೂ ವಿರೋಧಿ ನೀತಿ ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರಕಾರ ತಕ್ಷಣ ಕಠಿಣ ಕ್ರಮಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪುವೃತ್ತರಾಗಬೇಕು.
ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಚಿಕ್ಕ ಘಟನೆ ನಡೆದ ಕೂಡಲೇ ಬೀದಿಗಿಳಿಯುವ ಎಡಪಂಥೀಯ, ಜಾತ್ಯತೀತ ಮುಖವಾಡ ತೊಟ್ಟ ಬುದ್ಧಿಜೀವಿಗಳು, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಚಕಾರ ಎತ್ತುತ್ತಿಲ್ಲ. ಹಿಂದೂಗಳ ಮೇಲಿನ ದಾಳಿಯ ಬಗ್ಗೆ ದಿವ್ಯ ಮೌನ ವಹಿಸುವ ಮೂಲಕ ಪ್ರಗತಿಪರರು ಐಸಿಸ್ ಮನಸ್ಥಿತಿಯ ಮತೀಯ ಶಕ್ತಿಗಳಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ.
ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಈಗಾಗಲೇ ಕಾರ್ಯ ಪುವೃತ್ತವಾಗಿದ್ದು, ಹಿಂದೂಗಳ ವಿರುದ್ಧ ದಾಳಿ ಮಾಡುತ್ತಿರುವ ಮತೀಯ ಶಕ್ತಿಗಳಿಗೆ ತಕ್ಕ ಉತ್ತರ ನೀಡಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…