Featured

ಉಡುಪಿ : ಮತ್ತೊಮ್ಮೆ ಅನಾರೋಗ್ಯ ಪೀಡಿತ ಮಕ್ಕಳ ನೆರವಿಗೆ ಸಹಾಯಾರ್ಥವಾಗಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಈ ಬಾರಿಯೂ ಬರಲಿದ್ದಾರೆ ರವಿ ಕಟಪಾಡಿ -Vishwanews24

ಉಡುಪಿ : ಮತ್ತೊಮ್ಮೆ ಅನಾರೋಗ್ಯ ಪೀಡಿತ ಮಕ್ಕಳ ನೆರವಿಗೆ ಸಹಾಯಾರ್ಥವಾಗಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಈ ಬಾರಿಯೂ ಬರಲಿದ್ದಾರೆ ರವಿ ಕಟಪಾಡಿ -Vishwanews24

ಉಡುಪಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಲಕ್ಷಾಂತರ ರೂಪಾಯಿ ಹಣ ಇರಬೇಕು ಎಂದೇನಿಲ್ಲ. ಒಳ್ಳೆಯ ಮನಸಿದ್ದರೆ ಸಾಕು. ಉಡುಪಿಯ ರವಿ ಕಟಪಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ದಿನ ವೇಷಹಾಕಿ ಕಳೆದ ಆರು ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿದ್ದಾರೆ. ಈ ಬಾರಿ ಹಾಲಿವುಡ್ ಸಿನಿಮಾದ ಡಾರ್ಕ್ ಅಲೈಟ್ ವೇಷದಲ್ಲಿ ರವಿ ಪ್ರತ್ಯಕ್ಷ ಆಗಲಿದ್ದಾರೆ.

ಸಾಂಕ್ರಾಮಿಕ ಕೊರೊನಾ ನಡುವೆಯೇ ಶ್ರೀಕೃಷ್ಣ ಜನ್ಮಾಷ್ಟಮಿ ಬಂದಿದೆ. ಅದ್ದೂರಿ ಅಷ್ಟಮಿ ಆಚರಣೆಗೆ ಉಡುಪಿ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ಅಷ್ಟಮಿ ದಿನ ಸಾವಿರಾರು ಜನ ವೇಷ ಧರಿಸುತ್ತಿದ್ದರು, ಆದರೆ ಈ ಬಾರಿಯೂ ಅದಕ್ಕೆ ಚಾನ್ಸ್ ಇಲ್ಲ. ನಮ್ಮ ಪಬ್ಲಿಕ್ ಹೀರೋ, ಸಮಾಜಸೇವಕ ಉಡುಪಿಯ ರವಿ ಕಟಪಾಡಿಗೆ ಸ್ಪೆಷಲ್ ಅವಕಾಶ ಕೊಡಲಾಗಿದೆ. ಹಾಲಿವುಡ್ ಸಿನಿಮಾದ ಫ್ಯಾಂಟಸಿ ವೇಷ ಡಾರ್ಕ್ ಅಲೈಟ್ ಆಗಿ ಎರಡು ದಿನ ರವಿ ಉಡುಪಿಯಲ್ಲಿ ಓಡಾಡಲಿದ್ದಾರೆ.

ಈ ಕುರಿತು ಮಾತನಾಡಿದ ರವಿ ಕಟಪಾಡಿ, ಕಳೆದ ಬಾರಿ ಧನಸಹಾಯ ಮಾಡಲು ಆಗಿರಲಿಲ್ಲ. ಮನಸ್ಸಿಗೆ ಬಹಳ ಬೇಸರವಾಗಿತ್ತು. ಈ ಬಾರಿ ಮತ್ತೆ ಶ್ರೀಕೃಷ್ಣಜನ್ಮಾಷ್ಟಮಿ ಬಂದಿದೆ. ನಾಲ್ಕು ಮಕ್ಕಳಿಗೆ ಸಹಾಯ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆವು. ಆ ನಂತರ ಎರಡು ಕುಟುಂಬಗಳು ನಮ್ಮನ್ನು ಸಂಪರ್ಕ ಮಾಡಿದವು. ಅವರಿಗೂ ಸಹಾಯ ಮಾಡುತ್ತೇವೆ. ಕೊರೊನಾ ಕಾಲದಲ್ಲೂ ನಮಗೆ ಅವಕಾಶ ಕೊಟ್ಟ ಜಿಲ್ಲಾಡಳಿತಕ್ಕೆ ಧನ್ಯವಾದ. ಜನರ ಬಳಿಗೆ ಬರುತ್ತೇವೆ ನಿಮ್ಮ ಕೈಲಾದ ಸಹಾಯ ಮಾಡಿ ಎಂದು ರವಿ ವಿನಂತಿ ಮಾಡಿಕೊಂಡರು.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. ಬಿಗ್ ಬಿ ನಡೆಸುವ ಕರೋಡ್ ಪತಿಯಲ್ಲಿ ಬಂದ ಎಂಟು ಲಕ್ಷ ರೂಪಾಯಿಯನ್ನು ಪೂರ್ತಿಯಾಗಿ ಕಷ್ಟದಲ್ಲಿರುವವರಿಗೆ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ವೆಬ್ ಸೈಟ್ ಗಳಲ್ಲಿ ಬಂದ ಹಣದಲ್ಲಿ ಒಂದು ರೂಪಾಯಿಯನ್ನು ರವಿ ಇಟ್ಟುಕೊಂಡಿಲ್ಲ. ಕಳೆದ ಬಾರಿ ಕೊರೊನಾ ಸಾಂಕ್ರಾಮಿಕ ವಿಪರೀತ ಇದ್ದ ಕಾರಣ ರವಿ ಜನಜಾಗೃತಿಗಾಗಿ ವೇಷ ಹಾಕಿದ್ದರು. ಧನಸಂಗ್ರಹ ಮಾಡಿರಲಿಲ್ಲ. ಈ ಬಾರಿ ಜಿಲ್ಲಾಡಳಿತ ರವಿ ಕಟಪಾಡಿ ಅವರಿಗೆ ಸ್ಪೆಷಲ್ ಪರ್ಮಿಷನ್ ಕೊಟ್ಟಿದೆ. ರವಿ ಫ್ರೆಂಡ್ಸ್ ಕಟಪಾಡಿ ಆರು ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ಮಾಡಿದ್ದಾರೆ.

ರವಿ ಫ್ರೆಂಡ್ಸ್ ಸದಸ್ಯ ಕಾರ್ತಿಕ್ ಮಾತನಾಡಿ, ಆರು ವರ್ಷದಿಂದ ಈ ಸೇವೆಯನ್ನು ಮಾಡುತ್ತಿದ್ದೇವೆ. ರವಿ ಕಟಪಾಡಿ ಕೂಲಿ ಕೆಲಸ ಮಾಡಿ ಜೀವನ ಮಾಡುವವರು, ಅವರೂ ಕಷ್ಟದಲ್ಲಿದ್ದಾರೆ. ಆದರೆ ಇನ್ನೊಬ್ಬರ ಕಷ್ಟಕ್ಕೆ ಮಾಡುವ ಸಹಾಯದಿಂದ ಅವರು ಸಂತೃಪ್ತಿ ಪಡೆಯುತ್ತಾರೆ. ನಮಗೂ ಅದೇ ಖುಷಿ. ನಾಲ್ಕು ದಿನ ನಿರಂತರ ಶ್ರಮ ಪಡುತ್ತೇವೆ. ರವಿ ಆಹಾರ ಇಲ್ಲದೆ ಎರಡು ದಿನ ಉಪವಾಸವಿದ್ದು ವೇಷ ಹಾಕುತ್ತಾರೆ ಎಂದರು.

ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸುಸಂಧರ್ಭದಲ್ಲಿ ವಿಭಿನ್ನ ರೀತಿಯಲ್ಲಿ ಜನಾಕರ್ಷಣೀಯವಾಗಿ ವೇಷ ಧರಿಸಿಕೊಂಡು ಜಿಲ್ಲೆಯಾದ್ಯಂತ ಸಂಚರಿಸುತ್ತಾ ಅನಾರೋಗ್ಯ ಪೀಡಿತ ಮಕ್ಕಳಿಗೆ ಕಳೆದೈದು ವರುಷಗಳಿಂದ ಆಸರೆಯಾಗುತ್ತ ಬಂದಿರುವ ರವಿ ಕಟಪಾಡಿಯವರು ನಿಮ್ಮೆಲ್ಲರ ಮುಂದೆ ಮತ್ತೊಮ್ಮೆ ಸಹಾಯಾರ್ಥ ವಾಗಿ ವೇಷಧರಿಸಿಕೊಂಡು ಈ ಬಾರಿಯೂ ಬರಲಿದ್ದಾರೆ ತಮ್ಮೆಲ್ಲರ ಸಹಕಾರವಿರಲಿ…….

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

8 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

8 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

9 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

10 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

10 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

10 hours ago