ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ-2024 ರ ಮತ ಎಣಿಕಾ ಕಾರ್ಯವು ಜೂನ್ 4 ರಂದು ಉಡುಪಿಯ ಅಜ್ಜರಕಾಡು ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಅಂದು ಬೆಳಗ್ಗೆ 5 ಗಂಟೆಯಿAದ ಮತ ಎಣಿಕೆ ಮುಗಿಯುವ ವರೆಗೆ ಸದ್ರಿ ರಸ್ತೆಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ಈ ಕೆಳಗಿನಂತೆ ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್ನಿoದ ನಾಯಕ್ ಕ್ಯಾಂಟೀನ್ ವರೆಗಿನ ಮತ್ತು ಅಜ್ಜರಕಾಡು ಜಂಕ್ಷನ್ನಿoದ ಸುದರ್ಶನ್ ರೆಸಿಡೆನ್ಸಿ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಬೇಕು.
ಮತ ಎಣಿಕೆಯ ಸಂಬoಧ ಸರಕಾರಿ ಅಧಿಕಾರಿಗಳ ವಾಹನಗಳ ಪಾರ್ಕಿಂಗ್ ದೃಷ್ಠಿಯಿಂದ ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್ನಿoದ ಅಜ್ಜರಕಾಡು ಜಂಕ್ಷನ್ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಹಾಗೂ ಅಜ್ಜರಕಾಡು ಜಂಕ್ಷನ್ನಿoದ ಬ್ರಹ್ಮಗಿರಿ ಜಂಕ್ಷನ್ ವರೆಗಿನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಬದಲಾಯಿಸಿದೆ.
ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ನಿಯಮ 1989 ರ ನಿಯಮ 221 (5)(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಈ ಆದೇಶವನ್ನು ಹೊರಡಿಸಿರುತ್ತಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…