ಉಡುಪಿ : ರಾಜ್ಯಾದ್ಯಂತ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಪ್ರಭಾವವನ್ನು ನಿಯಂತ್ರಿಸುವ ಸಲುವಾಗಿ ಅನೇಕ ಕಠಿಣ ಕ್ರಮಗಳನ್ನು ಜಾರಿಗೆ ತರಲಾಗಿದೆ. ಅವುಗಳಲ್ಲಿ ಹೆಚ್ಚು ಜನ ಸೇರಬಹುದಾದ ಮದುವೆ ಕಾರ್ಯಕ್ರಮಕ್ಕೆ ವಿಧಿಸಿರುವ ನಿಯಮ ಕುರಿತಂತೆ ಸಾರ್ವಜನಿಕರಲ್ಲಿ
ಅನೇಕ ಗೊಂದಲ ಮೂಡಿತ್ತು.
ಯಾಕೆಂದರೆ ವಾರಂತ್ಯ ಲಾಕ್ಡೌನ್ ಆದೇಶದ ನಂತರ ವಾರಂತ್ಯದಲ್ಲೇ ಹೆಚ್ಚಾಗಿ ನಡೆಯುವ ವಿವಾಹ ಸಮಾರಂಭಗಳ ಕುರಿತು ಈಗಾಗಲೆ ನಿಗದಿಯಾಗಿರುವ ಮದುವೆ ಹಾಗೂ ಮುಂದೆ ನಡೆಯಬಹುದಾದ ಮದುವೆ ಕಾರ್ಯಕ್ರಮಗಳನ್ನು ಹೇಗೆ ನಡೆಸುವುದು, ಇದಕ್ಕೆ ಪ್ರತ್ಯೇಕ ನಿಯಮ ಇರಬಹುದೇ, ಪಾಸ್ ಪಡೆಯುವುದು ಹೇಗೆ ಹೀಗೆ ಅನೇಕ ಪ್ರಶ್ನೆಗಳು ಹುಟ್ಟಿಕೊಂಡಿದ್ದವು.
ಉಡುಪಿ: ಮೇ 4ರವರೆಗೆ ದೇವಸ್ಥಾನ, ಚರ್ಚ್, ಮಸೀದಿ ಬಂದ್ : ಜಿಲ್ಲಾಧಿಕಾರಿ -Vishwanews24
ಅದಕ್ಕೆ ಪೂರಕವಾಗಿ ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿ ಸಭಾಂಗಣದ ಒಳಗೆ ಹಾಗೂ ಹೊರಾಂಗಣಕ್ಕೆ ಎಂದು ಪ್ರತ್ಯೇಕ ಜನರ ಮಿತಿಯನ್ನು ಸರಕಾರ
ನಿಗದಿಪಡಿಸಿದೆ. ಇದರೊಂದಿಗೆ ಮದುವೆ ಸಮಾರಂಭಕ್ಕೆ ಆಗಮಿಸುವವರಿಗೆ ಪಾಸ್ ಕಡ್ಡಾಯ ಎಂದೂ ತಿಳಿಸಿದೆ. ಇದು ಸಾಕಷ್ಟು ಗೊಂದಲಕ್ಕೆ
ಕಾರಣವಾಗಿತ್ತು. ಮದುವೆಯ ಅನುಮತಿಗಾಗಿ ನಿಯೋಜಿತ ಅಧಿಕಾರಿಯ ಬಳಿಗೆ ಹೋಗಬೇಕು. ಮದುವೆಗೆ ಆಗಮಿಸುವ 50 ಮಂದಿಯ ಆಧಾರ್
ಕಾಡ್ರ್ನ್ನು ನೀಡಬೇಕು. ಅದರ ಆಧಾರದಲ್ಲಿ 50 ಪಾಸ್ಗಳನ್ನು ನೀಡಲಾಗುತ್ತದೆ. ಮದುವೆಗೆ ಆಗಮಿಸುವವರು ಪಾಸ್ ತೋರಿಸಿದರಷ್ಟೇ ಪೊಲೀಸರು
ಅವಕಾಶ ನೀಡುತ್ತಾರೆ.
ಮದುವೆ ಮನೆಗೆ ನೋಡೆಲ್ ಅಧಿಕಾರಿ ಬಂದಾಗ ಪಾಸ್ ರಹಿತರು ಇದ್ದರೆ, ಮಿತಿಗಿಂತ ಹೆಚ್ಚಿನ ಜನ ಇದ್ದರೆ ಕೇಸು ದಾಖಲಿಸಲಾಗುತ್ತದೆ ಎನ್ನುವುದು ಸದ್ಯದ
ನಿಯಮ, ಆಮಂತ್ರಣ ಪತ್ರಿಕೆ ನೀಡುವಾಗ ಆಧಾರ್ ಸಂಗ್ರಹಿಸುವ ಸಂಕಷ್ಟ ಒಂದೆಡೆಯಾದರೆ ಸೀಮಿತ ಪಾಸ್ ಪಡೆದು ಆಮಂತ್ರಿತರಿಗೆ ಬರಲು
ಸಾಧ್ಯವಾಗದೇ ಇದ್ದಾಗ ಬದಲಿಗೆ ಬೇರೆಯವರೂ ಬರುವಂತಿಲ್ಲ ಎಂಬ ಸಮಸ್ಯೆಯೂ ಇಲ್ಲಿ ಕಾಡುತ್ತಿದೆ. ಈ ನಡುವೆ ನಿಯಮಗಳಿಗೆ ಸಂಬಂಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಪ್ರತಿಕ್ರಿಯೆ ನೀಡಿದ್ದು ಮದುವೆಗೆ ಅನುಮತಿ ಪಡೆಯಲು ಸಮಾರಂಭಕ್ಕೆ ಆಗಮಿಸುವ 50 ಜನರ ಹೆಸರಿನ ಪಟ್ಟಿಯನ್ನಷ್ಟೇ ಸಂಬಂಧಪಟ್ಟ ಅಧಿಕಾರಿಗೆ ನೀಡಬೇಕು. ಅವರಿಗೆ ಪಾಸ್ ನೀಡಲಾಗುವುದು. ಆಧಾರ್ ಕಡ್ಡಾಯ ಅಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಸರು ಮಾತ್ರ ಪಡೆದುಕೊಳ್ಳುವಂತೆ ಸೂಚಿಸಲಾಗುವುದು ಎಂದು ತಿಳಿಸಿರೋದಾಗಿ ವರದಿಯಾಗಿದೆ.
ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…