ಉಡುಪಿ: ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು.
ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಇದೆ ಎಂದು ಮನೆ ಯವರಲ್ಲಿ ಹೇಳಿ, ಮೊಬೈಲ್, ಕೈಯಲ್ಲಿದ್ದ ಚಿನ್ನದ ಬ್ರಾಸ್ಲೇಟ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.
ಮೆಹಂದಿಯ ಸಂಭ್ರಮದಲ್ಲಿ ಇದ್ದ ಮನೆಯವರು ಹುಡುಗ ಮನೆಗೆ ಬಾರದೆ ಇರುವುದರಿಂದ ಗಾಬರಿಯಿಂದ ಹುಡುಕಾಟದಲ್ಲಿ ತೊಡಗಿದರು. ಬಳಿಕ ಹುಡುಗ ನಾಪತ್ತೆ ವಿಷಯ ತಿಳಿದು ಬಂದ ಅತಿಥಿಗಳೆಲ್ಲಾರೂ ವಾಪಸು ತೆರಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…