ಉಡುಪಿ: ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು.
ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಇದೆ ಎಂದು ಮನೆ ಯವರಲ್ಲಿ ಹೇಳಿ, ಮೊಬೈಲ್, ಕೈಯಲ್ಲಿದ್ದ ಚಿನ್ನದ ಬ್ರಾಸ್ಲೇಟ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.
ಮೆಹಂದಿಯ ಸಂಭ್ರಮದಲ್ಲಿ ಇದ್ದ ಮನೆಯವರು ಹುಡುಗ ಮನೆಗೆ ಬಾರದೆ ಇರುವುದರಿಂದ ಗಾಬರಿಯಿಂದ ಹುಡುಕಾಟದಲ್ಲಿ ತೊಡಗಿದರು. ಬಳಿಕ ಹುಡುಗ ನಾಪತ್ತೆ ವಿಷಯ ತಿಳಿದು ಬಂದ ಅತಿಥಿಗಳೆಲ್ಲಾರೂ ವಾಪಸು ತೆರಳಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…