ಉಡುಪಿ: ಮದ್ಯ ಸೇವನೆ ಮಾಡಿದ ಖಾಸಗಿ ಬಸ್ ಚಾಲಕನೊಬ್ಬ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ, ನಶೆಯಿಂದ ಎದ್ದು ನಿಲ್ಲಲಾಗದೇ ರಸ್ತೆಯಲ್ಲೇ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಡುಪಿಯ ಕುಂದಾಪುರ ಮೂಲದ ಭಾರತಿ ಬಸ್ಸಿನ ಚಾಲಕ ಕಂಠಪೂರ್ತಿ ಕುಡಿದು, ಕುಂದಾಪುರದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್ಸಿಗೆ ಚಾಲಕನಾಗಿದ್ದ. ಮಾರ್ಗ ಮಧ್ಯೆ ಈತನ ತಲೆಗೆ ನಶೆ ಏರಿದ್ದು, ಈ ವೇಳೆ ಬಸ್ ನಿಲ್ಲಿಸಿ ಬಸ್ನಿಂದ ಇಳಿದು, ತೂರಾಡುತ್ತಾ ಹೊರಕ್ಕೆ ಬಂದು ರಸ್ತೆಯಲ್ಲೇ ಬಿದ್ದಿದ್ದಾನೆ.
ಬಸ್ ನಿಲ್ಲಿಸಿ ಈತ ಕೆಳಕ್ಕೆ ಇಳಿದ ಪರಿಣಾಮ ಭಾರೀ ಪ್ರಾಣಾಪಾಯ ತಪ್ಪಿದೆ. ಈ ನಡುವೆ ಮತ್ತೆ ಬಸ್ಸಿಗೆ ಬಂದು ಚಾಲನೆ ಮಾಡಲು ಮುಂದಾಗುತ್ತಿದ್ದಂತೆ ಪ್ರಯಾಣಿಕರೇ ಸೇರಿ ಧರ್ಮದೇಟು ನೀಡಿ, ಬಸ್ಸಿನ ಮಾಲಕರಿಗೆ ದೂರು ನೀಡಿದ್ದಾರೆ.
ಬಳಿಕ ಬೇರೆ ಚಾಲಕನನ್ನು ಕರೆಸಿಕೊಂಡು, ಪ್ರಯಾಣ ಮುಂದುವರಿಸಲಾಗಿದೆ.
ಚಾಲಕನ ಈ ರಾದ್ಧಾಂತವನ್ನು ಪ್ರಯಾಣಿಕರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದು ವೈರಲ್ ಆಗಿದೆ.
BSY ಭ್ರಷ್ಟಾಚಾರದ ಆರೋಪ : ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ – Vishwanews24
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…