ಉಡುಪಿ: ಮದ್ಯ ಸೇವನೆ ಮಾಡಿದ ಖಾಸಗಿ ಬಸ್ ಚಾಲಕನೊಬ್ಬ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ, ನಶೆಯಿಂದ ಎದ್ದು ನಿಲ್ಲಲಾಗದೇ ರಸ್ತೆಯಲ್ಲೇ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಡುಪಿಯ ಕುಂದಾಪುರ ಮೂಲದ ಭಾರತಿ ಬಸ್ಸಿನ ಚಾಲಕ ಕಂಠಪೂರ್ತಿ ಕುಡಿದು, ಕುಂದಾಪುರದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್ಸಿಗೆ ಚಾಲಕನಾಗಿದ್ದ. ಮಾರ್ಗ ಮಧ್ಯೆ ಈತನ ತಲೆಗೆ ನಶೆ ಏರಿದ್ದು, ಈ ವೇಳೆ ಬಸ್ ನಿಲ್ಲಿಸಿ ಬಸ್ನಿಂದ ಇಳಿದು, ತೂರಾಡುತ್ತಾ ಹೊರಕ್ಕೆ ಬಂದು ರಸ್ತೆಯಲ್ಲೇ ಬಿದ್ದಿದ್ದಾನೆ.
ಬಸ್ ನಿಲ್ಲಿಸಿ ಈತ ಕೆಳಕ್ಕೆ ಇಳಿದ ಪರಿಣಾಮ ಭಾರೀ ಪ್ರಾಣಾಪಾಯ ತಪ್ಪಿದೆ. ಈ ನಡುವೆ ಮತ್ತೆ ಬಸ್ಸಿಗೆ ಬಂದು ಚಾಲನೆ ಮಾಡಲು ಮುಂದಾಗುತ್ತಿದ್ದಂತೆ ಪ್ರಯಾಣಿಕರೇ ಸೇರಿ ಧರ್ಮದೇಟು ನೀಡಿ, ಬಸ್ಸಿನ ಮಾಲಕರಿಗೆ ದೂರು ನೀಡಿದ್ದಾರೆ.
ಬಳಿಕ ಬೇರೆ ಚಾಲಕನನ್ನು ಕರೆಸಿಕೊಂಡು, ಪ್ರಯಾಣ ಮುಂದುವರಿಸಲಾಗಿದೆ.
ಚಾಲಕನ ಈ ರಾದ್ಧಾಂತವನ್ನು ಪ್ರಯಾಣಿಕರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದು ವೈರಲ್ ಆಗಿದೆ.
BSY ಭ್ರಷ್ಟಾಚಾರದ ಆರೋಪ : ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…