ಉಡುಪಿ: ಮದ್ಯ ಸೇವನೆ ಮಾಡಿದ ಖಾಸಗಿ ಬಸ್ ಚಾಲಕನೊಬ್ಬ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ, ನಶೆಯಿಂದ ಎದ್ದು ನಿಲ್ಲಲಾಗದೇ ರಸ್ತೆಯಲ್ಲೇ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಡುಪಿಯ ಕುಂದಾಪುರ ಮೂಲದ ಭಾರತಿ ಬಸ್ಸಿನ ಚಾಲಕ ಕಂಠಪೂರ್ತಿ ಕುಡಿದು, ಕುಂದಾಪುರದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್ಸಿಗೆ ಚಾಲಕನಾಗಿದ್ದ. ಮಾರ್ಗ ಮಧ್ಯೆ ಈತನ ತಲೆಗೆ ನಶೆ ಏರಿದ್ದು, ಈ ವೇಳೆ ಬಸ್ ನಿಲ್ಲಿಸಿ ಬಸ್ನಿಂದ ಇಳಿದು, ತೂರಾಡುತ್ತಾ ಹೊರಕ್ಕೆ ಬಂದು ರಸ್ತೆಯಲ್ಲೇ ಬಿದ್ದಿದ್ದಾನೆ.
ಬಸ್ ನಿಲ್ಲಿಸಿ ಈತ ಕೆಳಕ್ಕೆ ಇಳಿದ ಪರಿಣಾಮ ಭಾರೀ ಪ್ರಾಣಾಪಾಯ ತಪ್ಪಿದೆ. ಈ ನಡುವೆ ಮತ್ತೆ ಬಸ್ಸಿಗೆ ಬಂದು ಚಾಲನೆ ಮಾಡಲು ಮುಂದಾಗುತ್ತಿದ್ದಂತೆ ಪ್ರಯಾಣಿಕರೇ ಸೇರಿ ಧರ್ಮದೇಟು ನೀಡಿ, ಬಸ್ಸಿನ ಮಾಲಕರಿಗೆ ದೂರು ನೀಡಿದ್ದಾರೆ.
ಬಳಿಕ ಬೇರೆ ಚಾಲಕನನ್ನು ಕರೆಸಿಕೊಂಡು, ಪ್ರಯಾಣ ಮುಂದುವರಿಸಲಾಗಿದೆ.
ಚಾಲಕನ ಈ ರಾದ್ಧಾಂತವನ್ನು ಪ್ರಯಾಣಿಕರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದು ವೈರಲ್ ಆಗಿದೆ.
BSY ಭ್ರಷ್ಟಾಚಾರದ ಆರೋಪ : ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…