Featured

ಉಡುಪಿ : ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು : ರಘುಪತಿ ಭಟ್  – Vishwanews24

ಉಡುಪಿ: ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು ..

ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣ ಮಠಕ್ಕಾಗಲಿ ಅನಂತೇಶ್ವರ ಕ್ಕಾಗಲಿ ನೀಡಿಲ್ಲ ಎನ್ನುವುದು ಸ್ಪಷ್ಟ..

ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ನಮಗೆ ತಿಳಿದಿಲ್ಲ :  ರಘುಪತಿ ಭಟ್

ಉಡುಪಿ: ಉಡುಪಿಯಲ್ಲಿರುವ ಪ್ರಸಿದ್ಧ ಶ್ರೀಕೃಷ್ಣ ಮಠ ನಿರ್ಮಾಣಕ್ಕೆ ಮುಸ್ಲಿಂ ರಾಜರೊಬ್ಬರು ಜಾಗ ನೀಡಿದ್ದಾರೆ ಎಂಬ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಉಡುಪಿ ಶಾಸಕ ಕೆ ರಘುಪತಿ ಭಟ್ “ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ನಮಗೆ ತಿಳಿದಿಲ್ಲ,ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು” ಎಂದು ಹೇಳಿದ್ದಾರೆ.

“ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣ ಮಠಕ್ಕಾಗಲಿ ಅನಂತೇಶ್ವರ ಕ್ಕಾಗಲಿ ನೀಡಿಲ್ಲ ಎನ್ನುವುದು ಸ್ಪಷ್ಟ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೇ ಕೃಷ್ಣ ಮಠಕ್ಕೆಂದು ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ. ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತಿದೆ. ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ.ಉಡುಪಿ ಸೌಹಾರ್ದತೆಗೆ ಹೆಸರಾದ ಕ್ಷೇತ್ರವಾಗಿದ್ದುಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ” ಎಂದು ಹೇಳಿದ್ದಾರೆ.

ಇನ್ನು ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ. ಮಠದ ಚಿಂತೆ ಬಿಟ್ಟು ಅವರು ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ.ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago