ಉಡುಪಿ: ಉಡುಪಿಯಲ್ಲಿರುವ ಪ್ರಸಿದ್ಧ ಶ್ರೀಕೃಷ್ಣ ಮಠ ನಿರ್ಮಾಣಕ್ಕೆ ಮುಸ್ಲಿಂ ರಾಜರೊಬ್ಬರು ಜಾಗ ನೀಡಿದ್ದಾರೆ ಎಂಬ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಉಡುಪಿ ಶಾಸಕ ಕೆ ರಘುಪತಿ ಭಟ್ “ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ನಮಗೆ ತಿಳಿದಿಲ್ಲ,ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು” ಎಂದು ಹೇಳಿದ್ದಾರೆ.
“ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣ ಮಠಕ್ಕಾಗಲಿ ಅನಂತೇಶ್ವರ ಕ್ಕಾಗಲಿ ನೀಡಿಲ್ಲ ಎನ್ನುವುದು ಸ್ಪಷ್ಟ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೇ ಕೃಷ್ಣ ಮಠಕ್ಕೆಂದು ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ. ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತಿದೆ. ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ.ಉಡುಪಿ ಸೌಹಾರ್ದತೆಗೆ ಹೆಸರಾದ ಕ್ಷೇತ್ರವಾಗಿದ್ದುಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ” ಎಂದು ಹೇಳಿದ್ದಾರೆ.
ಇನ್ನು ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ. ಮಠದ ಚಿಂತೆ ಬಿಟ್ಟು ಅವರು ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ.ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…