Featured

ಉಡುಪಿ : ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು : ರಘುಪತಿ ಭಟ್  – Vishwanews24

ಉಡುಪಿ: ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು ..

ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣ ಮಠಕ್ಕಾಗಲಿ ಅನಂತೇಶ್ವರ ಕ್ಕಾಗಲಿ ನೀಡಿಲ್ಲ ಎನ್ನುವುದು ಸ್ಪಷ್ಟ..

ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ನಮಗೆ ತಿಳಿದಿಲ್ಲ :  ರಘುಪತಿ ಭಟ್

ಉಡುಪಿ: ಉಡುಪಿಯಲ್ಲಿರುವ ಪ್ರಸಿದ್ಧ ಶ್ರೀಕೃಷ್ಣ ಮಠ ನಿರ್ಮಾಣಕ್ಕೆ ಮುಸ್ಲಿಂ ರಾಜರೊಬ್ಬರು ಜಾಗ ನೀಡಿದ್ದಾರೆ ಎಂಬ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಉಡುಪಿ ಶಾಸಕ ಕೆ ರಘುಪತಿ ಭಟ್ “ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ನಮಗೆ ತಿಳಿದಿಲ್ಲ,ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು” ಎಂದು ಹೇಳಿದ್ದಾರೆ.

“ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣ ಮಠಕ್ಕಾಗಲಿ ಅನಂತೇಶ್ವರ ಕ್ಕಾಗಲಿ ನೀಡಿಲ್ಲ ಎನ್ನುವುದು ಸ್ಪಷ್ಟ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೇ ಕೃಷ್ಣ ಮಠಕ್ಕೆಂದು ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ. ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತಿದೆ. ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ.ಉಡುಪಿ ಸೌಹಾರ್ದತೆಗೆ ಹೆಸರಾದ ಕ್ಷೇತ್ರವಾಗಿದ್ದುಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ” ಎಂದು ಹೇಳಿದ್ದಾರೆ.

ಇನ್ನು ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ. ಮಠದ ಚಿಂತೆ ಬಿಟ್ಟು ಅವರು ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ.ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

 

Vishwa News 24

Recent Posts

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

41 minutes ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

55 minutes ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

16 hours ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

24 hours ago

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

3 days ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

3 days ago