ಉಡುಪಿ : ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ, ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆಯು ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಸನಿಹ ಮಂಗಳವಾರ ನಡೆದಿದೆ.
ಮೃತ ಮಹಿಳೆ ಭಾರತಿ ಶೆಟ್ಟಿಗಾರ್(53) ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಮಹಿಳೆ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ 500 ರೂ ಬೈಲೂರು ಮಹಿಷಿಮರ್ಧಿನಿ ದೇವಸ್ಥಾನದಲ್ಲಿ ನಡೆಯುವ ಹೂವಿನ ಪೂಜೆಗೆ ಮತ್ತು 200 ರೂಪಾಯಿ ದಿನ ಪತ್ರಿಕೆಯ ತಿಂಗಳ ಬಿಲ್ಲು ಪಾವತಿಸಬೇಕು, ಗಂಡನ ಪೋಷಣೆಗೆ ನನ್ನ ಚಿನ್ನ ಹಣ ಸಾಕು ಎಂದು ಬರೆಯಲಾಗಿದೆ.
ಘಟನಾ ಸ್ಥಳದಲ್ಲಿದ್ದು ಎ.ಎಸ್.ಐ ವಿಜಯ, ತನಿಖಾ ಸಹಾಯಕರಾಗಿರುವ ನೇತ್ರ, ಶಿವಕುಮಾರ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಉಚಿತ ಅಂಬುಲೇನ್ಸ್ ಸೇವೆ ನೀಡಿ ಇಲಾಖೆಗೆ ನೆರವಾದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…