ಉಡುಪಿ : ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು ಎಂದು ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಸಮಾವೇಶದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಏಂಜೆಂಟರ ವಿರುದ್ಧ ಹೋರಾಟ ಆರಂಭಿಸಿದಕ್ಕಾಗಿ ದುರ್ಗಾ ದೌಡ್ ಮಾಡಲಾಗಿದೆ. ಕಾಂಗ್ರೆಸ್ ಹಿಂದೂಗಳ ಮೇಲೆ ಸುಳ್ಳು ಉಗ್ರವಾದದ ನೂರಾರು ಕೇಸು ದಾಖಲಿಸಿದೆ. ಖಡ್ಗ ಹಿಡಿದು ಮೆರವಣಿಗೆ ಮಾಡಲು ಅನುಮತಿ ಸಿಗಲಿಲ್ಲ. ಮೆರವಣಿಗೆಯಲ್ಲಿ ನಾವು ಬಹಿರಂಗವಾಗಿ ಶಸ್ತ್ರಾಸ್ತ್ರ ಬಳಕೆ ಮಾಡಿಲ್ಲ. ಸಂದರ್ಭ ಒದಗಿ ಬಂದಾಗ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ವೇಳೆ ಶೀಘ್ರದಲ್ಲೇ ಆರ್.ಎಸ್.ಎಸ್ ಗೆ ನೂರು ವರ್ಷ ಪೂರ್ಣವಾಗುತ್ತಿದೆ. ಮುಂದಿನ ಮೂರು ವರ್ಷದಲ್ಲಿ ಊರು ಹಳ್ಳಿ ಮನೆಗೆ ಸಂಘ ತಲುಪುತ್ತದೆ. ಹಿಂದೂ ಜಾಗರಣ ವೇದಿಕೆ ಶಸ್ತ್ರಾಸ್ತ್ರ ಮೂಲಕ ಮನೆಗಳನ್ನು ತಲುಪುತ್ತದೆ. ಪ್ರತಿ ಹಿಂದೂಗಳ ಮನೆಯಲ್ಲಿ ಆಯುಧ ಪೂಜೆ ಆಗಬೇಕು. ಆಯುಧ ಪೂಜೆಗೆ ಹಳೇ ಸೈಕಲ್, ಗ್ರೈಂಡರ್, ಮಿಕ್ಸಿಗೆ ಪೂಜೆ ಮಾಡಬೇಡಿ. ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಪೂಜೆಯ ಜೊತೆಗೆ ಶಸ್ತ್ರ ಬಳಸುವ ಮನೋ ಸ್ಥೈರ್ಯ ಮುಂದೆ ಬೆಳೆಸೋಣ. ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು ಎಂದು ಹೇಳಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…