ಉಡುಪಿ : ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು ಎಂದು ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಸಮಾವೇಶದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಏಂಜೆಂಟರ ವಿರುದ್ಧ ಹೋರಾಟ ಆರಂಭಿಸಿದಕ್ಕಾಗಿ ದುರ್ಗಾ ದೌಡ್ ಮಾಡಲಾಗಿದೆ. ಕಾಂಗ್ರೆಸ್ ಹಿಂದೂಗಳ ಮೇಲೆ ಸುಳ್ಳು ಉಗ್ರವಾದದ ನೂರಾರು ಕೇಸು ದಾಖಲಿಸಿದೆ. ಖಡ್ಗ ಹಿಡಿದು ಮೆರವಣಿಗೆ ಮಾಡಲು ಅನುಮತಿ ಸಿಗಲಿಲ್ಲ. ಮೆರವಣಿಗೆಯಲ್ಲಿ ನಾವು ಬಹಿರಂಗವಾಗಿ ಶಸ್ತ್ರಾಸ್ತ್ರ ಬಳಕೆ ಮಾಡಿಲ್ಲ. ಸಂದರ್ಭ ಒದಗಿ ಬಂದಾಗ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ವೇಳೆ ಶೀಘ್ರದಲ್ಲೇ ಆರ್.ಎಸ್.ಎಸ್ ಗೆ ನೂರು ವರ್ಷ ಪೂರ್ಣವಾಗುತ್ತಿದೆ. ಮುಂದಿನ ಮೂರು ವರ್ಷದಲ್ಲಿ ಊರು ಹಳ್ಳಿ ಮನೆಗೆ ಸಂಘ ತಲುಪುತ್ತದೆ. ಹಿಂದೂ ಜಾಗರಣ ವೇದಿಕೆ ಶಸ್ತ್ರಾಸ್ತ್ರ ಮೂಲಕ ಮನೆಗಳನ್ನು ತಲುಪುತ್ತದೆ. ಪ್ರತಿ ಹಿಂದೂಗಳ ಮನೆಯಲ್ಲಿ ಆಯುಧ ಪೂಜೆ ಆಗಬೇಕು. ಆಯುಧ ಪೂಜೆಗೆ ಹಳೇ ಸೈಕಲ್, ಗ್ರೈಂಡರ್, ಮಿಕ್ಸಿಗೆ ಪೂಜೆ ಮಾಡಬೇಡಿ. ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಪೂಜೆಯ ಜೊತೆಗೆ ಶಸ್ತ್ರ ಬಳಸುವ ಮನೋ ಸ್ಥೈರ್ಯ ಮುಂದೆ ಬೆಳೆಸೋಣ. ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…