Featured

ಉಡುಪಿ: ಮನೆ ಬಾಗಿಲು ಮುರಿದು 18.35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಗದು ಕಳ್ಳತನ – Vishwanews24

ಉಡುಪಿ: ಮನೆ ಬಾಗಿಲು ಮುರಿದು 18.35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಗದು ಕಳ್ಳತನ – Vishwanews24

ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿ ಸುಮಾರು ನಗದು, ಚಿನ್ನಾಭರಣ ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಎಗರಿಸಿದ ಘಟನೆ ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್‌ನ ಜಯಗಣೇಶ ಬೀಡು ಎಂಬವರ ಮನೆಯಲ್ಲಿ ನಡೆದಿದೆ.

ನ.6 ರ ಸಂಜೆ 6.15 ರ ನ.7 ರ ಬೆಳಿಗ್ಗೆ 10:45 ಗಂಟೆ ನಡುವೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಹಿಂಬಾಗಿಲಿನ ಕಿರು ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಮುರಿದು ಒಳ ಪ್ರವೇಶಿಸಿ, ಒಳಗಿನ ಬಾಗಿಲಿನ ಚಿಲಕದ ಬದಿ ಮುರಿದು ಮಾಸ್ಟರ್‌ ಬೆಡ್‌ರೂಮಿನ ಕೀ ತೆಗೆದು ಒಳಪ್ರವೇಶಿಸಿ, ಕಪಾಟನ್ನು ಹಾಗೂ ಲಾಕರ್‌ನ್ನು ಬಲಾತ್ಕಾರವಾಗಿ ಮೀಟಿ ತೆಗೆದು ಕಳ್ಳತನವೆಸಗಿದ್ದಾರೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳೆಗಳು, ಮುತ್ತಿನ ಸರ, ಉಂಗುರ, ವಜ್ರದ ಕಿವಿ ಓಲೆ, ನೆಕ್ಲೇಸ್‌ ಮುಂತಾದ ರೂ. 14 ಲಕ್ಷ ಮೌಲ್ಯದ 332 ಗ್ರಾಂ ತೂಕ ಚಿನ್ನಾಭರಣಗಳು ಹಾಗೂ ಗೆಸ್ಟ್‌ ರೂಮಿನ ಕಪಾಟಿನ ಲಾಕರ್‌ ಒಡೆದು ಅದರಲ್ಲಿದ್ದ ರೂಪಾಯಿ. 3,00,000 ಹಣವನ್ನು ಮತ್ತು ಸುಮಾರು 1,35,000 ಮೌಲ್ಯದ 45 ಹಳೆಯ ಬೆಳ್ಳಿಯ ನಾಣ್ಯಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ರೂಪಾಯಿ 18,35,000 ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

5 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

7 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

7 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

8 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

8 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

8 hours ago