ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿ ಸುಮಾರು ನಗದು, ಚಿನ್ನಾಭರಣ ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಎಗರಿಸಿದ ಘಟನೆ ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್ನ ಜಯಗಣೇಶ ಬೀಡು ಎಂಬವರ ಮನೆಯಲ್ಲಿ ನಡೆದಿದೆ.
ನ.6 ರ ಸಂಜೆ 6.15 ರ ನ.7 ರ ಬೆಳಿಗ್ಗೆ 10:45 ಗಂಟೆ ನಡುವೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಹಿಂಬಾಗಿಲಿನ ಕಿರು ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಮುರಿದು ಒಳ ಪ್ರವೇಶಿಸಿ, ಒಳಗಿನ ಬಾಗಿಲಿನ ಚಿಲಕದ ಬದಿ ಮುರಿದು ಮಾಸ್ಟರ್ ಬೆಡ್ರೂಮಿನ ಕೀ ತೆಗೆದು ಒಳಪ್ರವೇಶಿಸಿ, ಕಪಾಟನ್ನು ಹಾಗೂ ಲಾಕರ್ನ್ನು ಬಲಾತ್ಕಾರವಾಗಿ ಮೀಟಿ ತೆಗೆದು ಕಳ್ಳತನವೆಸಗಿದ್ದಾರೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳೆಗಳು, ಮುತ್ತಿನ ಸರ, ಉಂಗುರ, ವಜ್ರದ ಕಿವಿ ಓಲೆ, ನೆಕ್ಲೇಸ್ ಮುಂತಾದ ರೂ. 14 ಲಕ್ಷ ಮೌಲ್ಯದ 332 ಗ್ರಾಂ ತೂಕ ಚಿನ್ನಾಭರಣಗಳು ಹಾಗೂ ಗೆಸ್ಟ್ ರೂಮಿನ ಕಪಾಟಿನ ಲಾಕರ್ ಒಡೆದು ಅದರಲ್ಲಿದ್ದ ರೂಪಾಯಿ. 3,00,000 ಹಣವನ್ನು ಮತ್ತು ಸುಮಾರು 1,35,000 ಮೌಲ್ಯದ 45 ಹಳೆಯ ಬೆಳ್ಳಿಯ ನಾಣ್ಯಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ರೂಪಾಯಿ 18,35,000 ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…