ಉಡುಪಿ, : ಎರಡು ದಿನಗಳ ಹಿಂದೆ ಬ್ರಹ್ಮಾವರದ ಬೈಕಾಡಿ ಗ್ರಾಮದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಇಂದು ಬೆಳಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಪತ್ತೆಯಾಗಿರುವುದು ವರದಿಯಾಗಿದೆ.
ಮೃತರನ್ನು ಬೈಕಾಡಿ ಗ್ರಾಮದ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ ಮಯ್ಯ(60) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಮೃತದೇಹವನ್ನು ಮೇಲೆತ್ತಿ ಮುಂದಿನ ಕ್ರಮಕ್ಕಾಗಿ ಆಸ್ಪತ್ರೆಗೆ ಸಾಗಿಸಿದರು. ಈ ನಡುವೆ ಮೃತದೇಹವನ್ನು ಶ್ರೀಧರ ಮಯ್ಯರದ್ದೆಂದು ಅವರ ಪತ್ನಿ ಹಾಗೂ ಪುತ್ರಿ ಗುರುತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವಸ್ಥಾನದ ಅಧ್ಯಕ್ಷರಿಗೆ ಮರಣ ಪತ್ರ ಕಳಿಸಿದ್ದರು
ಶ್ರೀಧರ ಮಯ್ಯ ಜು.8ರ ಸಂಜೆ 5:15ಕ್ಕೆ ಕೋರ್ಟ್ ಕೇಸಿನ ವಿಚಾರವಾಗಿ ಚಿಕ್ಕಮಗಳೂರಿಗೆ ಹೋಗುತ್ತಿದ್ದು, ನಾಲ್ಕು ದಿನಗಳ ಬಳಿಕ ಬರುವುದಾಗಿ ಪುತ್ರಿ ನವ್ಯಾರಲ್ಲಿ ತಿಳಿಸಿ ತೆರಳಿದ್ದರು. ಇವರು ತೆರಳಿದ ಬಳಿಕ ಮಯ್ಯ ಬರೆದಿದ್ದೆನ್ನಲಾದ ರಿಜಿಸ್ಟರ್ಡ್ ಪತ್ರವೊಂದು ದೇವಸ್ಥಾನಕ್ಕೆ ಬಂದಿತ್ತು. ದೇವಸ್ಥಾನದ ಅಧ್ಯಕ್ಷರಿಗೆ ಬರೆದ ಆ ಪತ್ರದಲ್ಲಿ “ನನ್ನ ಆರೋಗ್ಯ ತುಂಬಾ ಕೆಳಮಟ್ಟದಲ್ಲಿದೆ. ವಿಪರೀತ ಕಾಲುನೋವು ಹಾಗೂ ವಿಪರೀತ ಬಿಕ್ಕಳಿಕೆಯಿಂದ ಬದುಕಿನಲ್ಲಿ ಜಿಗುಪ್ಸೆಗೊಂಡಿದ್ದು, ಜೀವವೇ ಬೇಡವೆನಿಸಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿತ್ತೆನ್ನಲಾಗಿದೆ. ಈ ಬಗ್ಗೆ ಮನೆಯವರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…