ಉಡುಪಿ

ಉಡುಪಿ : ಮರಳುಗಾರಿಕೆ ನಡೆಸಲು ಹಸಿರು ನಿಶಾನೆ

ಉಡುಪಿ: ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಗೊಳಪಡುವ (ಸಿಆರ್‌ಝೆಡ್‌) ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ ಮರಳುಗಾರಿಕೆ ನಡೆಸಲು ಕೊನೆಗೂ ಅನುಮತಿ ಸಿಕ್ಕಿದೆ.

ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ತೀವ್ರವಾಗಿದ್ದರಿಂದ ಜಿಲ್ಲಾಡಳಿತವು ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿರುವ ಮರಳು ದಿಬ್ಬಗಳನ್ನು ಗುರುತಿಸಿ, ಮರಳು ತೆಗೆಯಲು ಅನುಮತಿ ನೀಡುವಂತೆ ಈಚೆಗೆ ಕರ್ನಾಟಕ ರಾಜ್ಯ ಕರಾವಳಿ ವಲಯ, ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು.
ಜಿಲ್ಲಾಡಳಿತದ ಮನವಿಗೆ ಒಪ್ಪಿಗೆ ದೊರೆತಿದ್ದು, ನಿಯಮಗಳಿಗೆ ಬದ್ಧವಾಗಿ ಮರಳು ದಿಬ್ಬಗಳನ್ನು ತೆರವುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌  ಮಾಹಿತಿ ನೀಡಿದರು.

ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ 9 ಮರಳು ದಿಬ್ಬಗಳನ್ನು ಗುರುತಿಸಿ ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿತ್ತು. ಅದರಲ್ಲಿ 7 ದಿಬ್ಬಗಳ ತೆರವಿಗೆ ಮಾತ್ರ ಒಪ್ಪಿಗೆ ಸಿಕ್ಕಿದೆ. ಯಾವ ಜಾಗದಲ್ಲಿ ಮರಳು ತೆಗೆಯಬಹುದು ಎಂಬ ವಿವರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯ ನಾಮಫಲಕದಲ್ಲಿ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

2011ಕ್ಕಿಂತ ಹಿಂದೆ ಮರಳು ತೆಗೆಯಲು ಅರ್ಹ ಪರವಾನಗಿ ಹೊಂದಿರುವವರ ಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಅ.27ರ ಸಂಜೆ 5ರವರೆಗೆ ಅರ್ಜಿ ಹಾಕಲು ಸಮಯ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಡಿಸಿ ಹೇಳಿದರು.
ಪರವಾನಗಿ ಪಡೆಯಲು ಸರ್ಕಾರ ನಿಗಧಿಪಡಿಸಿರುವ ಹಣ ಪಾವತಿಸಬೇಕು. ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಷರತ್ತುಗಳಿಗೆ ಒಪ್ಪಿಗೆ ನೀಡಬೇಕು. ಇವೆಲ್ಲವನ್ನು ಪರಿಗಣಿಸಿ ಅರ್ಹರಿಗೆ ಮಾತ್ರ ಪರ್ಮಿಟ್ ನೀಡಲಾಗುವುದು. ನಾಳೆ ಅರ್ಜಿ ಹಾಕಿದರೆ, ನಾಳೆಯೇ ಪರವಾನಗಿ ನೀಡುತ್ತೇವೆ. ವಿಳಂಬ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಅಕ್ರಮವಾಗಿ ಎಲ್ಲೆಂರದಲ್ಲಿ ಮರಳು ತೆಗೆಯಲು ಅವಕಾಶವಿಲ್ಲ. ಜಿಪಿಎಸ್‌ ನೆರವಿನಿಂದ ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿ ಜಿಯೊ ಫೆನ್ಸಿಂಗ್ ಮೂಲಕ ಮರಳು ದಿಬ್ಬಗಳನ್ನು ಗುರುತಿಸಲಾಗಿದೆ. ಪರವಾನಗಿದಾರರು ಜಿಲ್ಲಾಡಳಿತ ಗುರುತಿಸಿರುವ ಜಾಗದಲ್ಲಿ ಮಾತ್ರ ಮರಳು ತೆಗೆಯಬೇಕು. ಒಂದು ಮೀಟರ್‌ ಆಳದವರೆಗೂ ಮಾತ್ರ ಮರಳು ತೆಗೆಯಲು ಅವಕಾಶವಿದೆ. ಯಾರೂ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ನಾನ್‌ ಸಿಆರ್‌ಝೆಡ್ ವ್ಯಾಪ್ತಿಯಲ್ಲೂ ಮರಳು ತೆಗೆಯಲು ಟೆಂಡರ್ ಕರೆಯಲಾಗಿದ್ದು, ಬುಧವಾರ ಕೊನೆಯ ದಿನ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಮರಳುಗಾರಿಕೆ ಆರಂಭವಾಗಲಿದೆ. ಈ ಭಾಗದಲ್ಲಿ ದೊರೆಯುವ ಮರಳು ಸಂಪೂರ್ಣವಾಗಿ ಸರ್ಕಾರಿ ಕಾಮಗಾರಿಗಳಿಗೆ ಮೀಸಲಾಗಿದೆ. ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಹಾಗೂ ಸರ್ಕಾರದ ವಸತಿ ಯೋಜನೆಗಳಿಗೆ ಈ ಮರಳನ್ನು ಬಳಸಿಕೊಳ್ಳಲಾಗುವುದು ಎಂದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago