ಉಡುಪಿ

ಉಡುಪಿ : ಮರಳುಗಾರಿಕೆ ನಡೆಸಲು ಹಸಿರು ನಿಶಾನೆ

ಉಡುಪಿ: ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಗೊಳಪಡುವ (ಸಿಆರ್‌ಝೆಡ್‌) ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ ಮರಳುಗಾರಿಕೆ ನಡೆಸಲು ಕೊನೆಗೂ ಅನುಮತಿ ಸಿಕ್ಕಿದೆ.

ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ತೀವ್ರವಾಗಿದ್ದರಿಂದ ಜಿಲ್ಲಾಡಳಿತವು ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿರುವ ಮರಳು ದಿಬ್ಬಗಳನ್ನು ಗುರುತಿಸಿ, ಮರಳು ತೆಗೆಯಲು ಅನುಮತಿ ನೀಡುವಂತೆ ಈಚೆಗೆ ಕರ್ನಾಟಕ ರಾಜ್ಯ ಕರಾವಳಿ ವಲಯ, ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು.
ಜಿಲ್ಲಾಡಳಿತದ ಮನವಿಗೆ ಒಪ್ಪಿಗೆ ದೊರೆತಿದ್ದು, ನಿಯಮಗಳಿಗೆ ಬದ್ಧವಾಗಿ ಮರಳು ದಿಬ್ಬಗಳನ್ನು ತೆರವುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌  ಮಾಹಿತಿ ನೀಡಿದರು.

ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ 9 ಮರಳು ದಿಬ್ಬಗಳನ್ನು ಗುರುತಿಸಿ ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿತ್ತು. ಅದರಲ್ಲಿ 7 ದಿಬ್ಬಗಳ ತೆರವಿಗೆ ಮಾತ್ರ ಒಪ್ಪಿಗೆ ಸಿಕ್ಕಿದೆ. ಯಾವ ಜಾಗದಲ್ಲಿ ಮರಳು ತೆಗೆಯಬಹುದು ಎಂಬ ವಿವರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯ ನಾಮಫಲಕದಲ್ಲಿ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

2011ಕ್ಕಿಂತ ಹಿಂದೆ ಮರಳು ತೆಗೆಯಲು ಅರ್ಹ ಪರವಾನಗಿ ಹೊಂದಿರುವವರ ಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಅ.27ರ ಸಂಜೆ 5ರವರೆಗೆ ಅರ್ಜಿ ಹಾಕಲು ಸಮಯ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಡಿಸಿ ಹೇಳಿದರು.
ಪರವಾನಗಿ ಪಡೆಯಲು ಸರ್ಕಾರ ನಿಗಧಿಪಡಿಸಿರುವ ಹಣ ಪಾವತಿಸಬೇಕು. ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಷರತ್ತುಗಳಿಗೆ ಒಪ್ಪಿಗೆ ನೀಡಬೇಕು. ಇವೆಲ್ಲವನ್ನು ಪರಿಗಣಿಸಿ ಅರ್ಹರಿಗೆ ಮಾತ್ರ ಪರ್ಮಿಟ್ ನೀಡಲಾಗುವುದು. ನಾಳೆ ಅರ್ಜಿ ಹಾಕಿದರೆ, ನಾಳೆಯೇ ಪರವಾನಗಿ ನೀಡುತ್ತೇವೆ. ವಿಳಂಬ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಅಕ್ರಮವಾಗಿ ಎಲ್ಲೆಂರದಲ್ಲಿ ಮರಳು ತೆಗೆಯಲು ಅವಕಾಶವಿಲ್ಲ. ಜಿಪಿಎಸ್‌ ನೆರವಿನಿಂದ ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿ ಜಿಯೊ ಫೆನ್ಸಿಂಗ್ ಮೂಲಕ ಮರಳು ದಿಬ್ಬಗಳನ್ನು ಗುರುತಿಸಲಾಗಿದೆ. ಪರವಾನಗಿದಾರರು ಜಿಲ್ಲಾಡಳಿತ ಗುರುತಿಸಿರುವ ಜಾಗದಲ್ಲಿ ಮಾತ್ರ ಮರಳು ತೆಗೆಯಬೇಕು. ಒಂದು ಮೀಟರ್‌ ಆಳದವರೆಗೂ ಮಾತ್ರ ಮರಳು ತೆಗೆಯಲು ಅವಕಾಶವಿದೆ. ಯಾರೂ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ನಾನ್‌ ಸಿಆರ್‌ಝೆಡ್ ವ್ಯಾಪ್ತಿಯಲ್ಲೂ ಮರಳು ತೆಗೆಯಲು ಟೆಂಡರ್ ಕರೆಯಲಾಗಿದ್ದು, ಬುಧವಾರ ಕೊನೆಯ ದಿನ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಮರಳುಗಾರಿಕೆ ಆರಂಭವಾಗಲಿದೆ. ಈ ಭಾಗದಲ್ಲಿ ದೊರೆಯುವ ಮರಳು ಸಂಪೂರ್ಣವಾಗಿ ಸರ್ಕಾರಿ ಕಾಮಗಾರಿಗಳಿಗೆ ಮೀಸಲಾಗಿದೆ. ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಹಾಗೂ ಸರ್ಕಾರದ ವಸತಿ ಯೋಜನೆಗಳಿಗೆ ಈ ಮರಳನ್ನು ಬಳಸಿಕೊಳ್ಳಲಾಗುವುದು ಎಂದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago