ಉಡುಪಿ

ಉಡುಪಿ : ಮರಳುಗಾರಿಕೆ ನಡೆಸಲು ಹಸಿರು ನಿಶಾನೆ

ಉಡುಪಿ: ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಗೊಳಪಡುವ (ಸಿಆರ್‌ಝೆಡ್‌) ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ ಮರಳುಗಾರಿಕೆ ನಡೆಸಲು ಕೊನೆಗೂ ಅನುಮತಿ ಸಿಕ್ಕಿದೆ.

ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ತೀವ್ರವಾಗಿದ್ದರಿಂದ ಜಿಲ್ಲಾಡಳಿತವು ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿರುವ ಮರಳು ದಿಬ್ಬಗಳನ್ನು ಗುರುತಿಸಿ, ಮರಳು ತೆಗೆಯಲು ಅನುಮತಿ ನೀಡುವಂತೆ ಈಚೆಗೆ ಕರ್ನಾಟಕ ರಾಜ್ಯ ಕರಾವಳಿ ವಲಯ, ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು.
ಜಿಲ್ಲಾಡಳಿತದ ಮನವಿಗೆ ಒಪ್ಪಿಗೆ ದೊರೆತಿದ್ದು, ನಿಯಮಗಳಿಗೆ ಬದ್ಧವಾಗಿ ಮರಳು ದಿಬ್ಬಗಳನ್ನು ತೆರವುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌  ಮಾಹಿತಿ ನೀಡಿದರು.

ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ 9 ಮರಳು ದಿಬ್ಬಗಳನ್ನು ಗುರುತಿಸಿ ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿತ್ತು. ಅದರಲ್ಲಿ 7 ದಿಬ್ಬಗಳ ತೆರವಿಗೆ ಮಾತ್ರ ಒಪ್ಪಿಗೆ ಸಿಕ್ಕಿದೆ. ಯಾವ ಜಾಗದಲ್ಲಿ ಮರಳು ತೆಗೆಯಬಹುದು ಎಂಬ ವಿವರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯ ನಾಮಫಲಕದಲ್ಲಿ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

2011ಕ್ಕಿಂತ ಹಿಂದೆ ಮರಳು ತೆಗೆಯಲು ಅರ್ಹ ಪರವಾನಗಿ ಹೊಂದಿರುವವರ ಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಅ.27ರ ಸಂಜೆ 5ರವರೆಗೆ ಅರ್ಜಿ ಹಾಕಲು ಸಮಯ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಡಿಸಿ ಹೇಳಿದರು.
ಪರವಾನಗಿ ಪಡೆಯಲು ಸರ್ಕಾರ ನಿಗಧಿಪಡಿಸಿರುವ ಹಣ ಪಾವತಿಸಬೇಕು. ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಷರತ್ತುಗಳಿಗೆ ಒಪ್ಪಿಗೆ ನೀಡಬೇಕು. ಇವೆಲ್ಲವನ್ನು ಪರಿಗಣಿಸಿ ಅರ್ಹರಿಗೆ ಮಾತ್ರ ಪರ್ಮಿಟ್ ನೀಡಲಾಗುವುದು. ನಾಳೆ ಅರ್ಜಿ ಹಾಕಿದರೆ, ನಾಳೆಯೇ ಪರವಾನಗಿ ನೀಡುತ್ತೇವೆ. ವಿಳಂಬ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಅಕ್ರಮವಾಗಿ ಎಲ್ಲೆಂರದಲ್ಲಿ ಮರಳು ತೆಗೆಯಲು ಅವಕಾಶವಿಲ್ಲ. ಜಿಪಿಎಸ್‌ ನೆರವಿನಿಂದ ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿ ಜಿಯೊ ಫೆನ್ಸಿಂಗ್ ಮೂಲಕ ಮರಳು ದಿಬ್ಬಗಳನ್ನು ಗುರುತಿಸಲಾಗಿದೆ. ಪರವಾನಗಿದಾರರು ಜಿಲ್ಲಾಡಳಿತ ಗುರುತಿಸಿರುವ ಜಾಗದಲ್ಲಿ ಮಾತ್ರ ಮರಳು ತೆಗೆಯಬೇಕು. ಒಂದು ಮೀಟರ್‌ ಆಳದವರೆಗೂ ಮಾತ್ರ ಮರಳು ತೆಗೆಯಲು ಅವಕಾಶವಿದೆ. ಯಾರೂ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ನಾನ್‌ ಸಿಆರ್‌ಝೆಡ್ ವ್ಯಾಪ್ತಿಯಲ್ಲೂ ಮರಳು ತೆಗೆಯಲು ಟೆಂಡರ್ ಕರೆಯಲಾಗಿದ್ದು, ಬುಧವಾರ ಕೊನೆಯ ದಿನ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಮರಳುಗಾರಿಕೆ ಆರಂಭವಾಗಲಿದೆ. ಈ ಭಾಗದಲ್ಲಿ ದೊರೆಯುವ ಮರಳು ಸಂಪೂರ್ಣವಾಗಿ ಸರ್ಕಾರಿ ಕಾಮಗಾರಿಗಳಿಗೆ ಮೀಸಲಾಗಿದೆ. ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಹಾಗೂ ಸರ್ಕಾರದ ವಸತಿ ಯೋಜನೆಗಳಿಗೆ ಈ ಮರಳನ್ನು ಬಳಸಿಕೊಳ್ಳಲಾಗುವುದು ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago