Featured

ಉಡುಪಿ ಮರಳುಗಾರಿಕೆ ಸಮಸ್ಯೆ ; ಹೃದಯಾಘಾತದಿಂದ ವ್ಯಕ್ತಿ ಸಾವು

ಉಡುಪಿ: ಮರಳುಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಿದ ಕಾರಣ ನಿರ್ಮಾಣ ಕಾಮಗಾರಿಗೆ ಸಂಕಷ್ಟ ಎದುರಾಗಿದ್ದು ವಿವಿಧ ಕಟ್ಟಡ ನಿರ್ಮಾಣ ಗುತ್ತಿಗೆದಾರರು, ನೌಕರರು ಇದರ ವಿರುದ್ಧ ಬೀದಿಗಿಳಿದಿದ್ದಾರೆ. ಹೀಗೆ ಮರಳು ಹೋರಾಟದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮರಳು ಗಣಿಗಾರಿಕೆಗೆ ಅನುಮತಿ ನೀಡಬೇಕೆಂದು ಹೋರಾಟ ನಡೆಸುತ್ತಿದ್ದ ಕಾಪುವಿನ ಹೆಜಮಾಡಿ ಗ್ರಾಮದ ನಿವಾಸಿ ಮಹಮ್ಮದ ಹನೀಫ್ (42) ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಮರಳುಗಾರಿಕೆಗೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಹನೀಫ್ ಬಾಗವಹಿಸಿದ್ದ ವೇಳೆ ಇದ್ದಕ್ಕಿದ್ದಂತೆ ಉದ್ವೇಗಕ್ಕೆ ಒಳಗಾಗಿದ್ದಾರೆ. ಈ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮಣಿಪಾಲದ ಕೀಂಸಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲ ನೀಡದ ಕಾರಣ ಸಾವನ್ನಪ್ಪಿದ್ದಾರೆ.
3 ಮಕ್ಕಳು ಮತ್ತು ಪತ್ನಿಯೊಂದಿಗೆ ಬಾಡಿಗೆ ಮನೆಯಲ್ಲಿ ಹನೀಫ್ ವಾಸಿಸುತ್ತಿದ್ದರು, ಮರಳುಗಾರಿಕೆ ನಂಬಿ ಸಾಲ ಮಾಡಿಕೊಂಡಿದ್ದ ಹನೀಫ್ ಗೆ ಇತ್ತೀಚೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು ಎಂದು ಹೇಳಲಾಗಿದೆ.
ಹನೀಫ್ ಸುಮಾರು 6 ಲಕ್ಷ ರೂ. ಸಾಲ ಮಾಡಿ ಎರಡು ನಾಡದೋಣಿ ಖರೀದಿಸಿ ಮರಳುಗಾರಿಕೆ ನಡೆಸುತ್ತಿದ್ದರು. ಇದೀಗ ಜಿಲ್ಲೆಯಾದ್ಯಂತ ಮರಳುಗಾರಿಕೆ ಸಂಪೂರ್ಣ ಸ್ಥಗಿತವಾಗಿದ್ದು ಯಾವುದೇ ಕಾರಣಕ್ಕೆ ನದಿಯಿಂದ ಮರಳು ತೆಗೆವಂತಿಲ್ಲ ಎಂದ್ಬ ಸರ್ಕಾರ ಆದೇಶದಿಂದ ಕೆಲಸವಿಲ್ಲದೆ ಕುಳಿತಿದ್ದರು. ಇದೇ ಕಾರಣದಿಂದ ಪ್ರತಿಭಟನೆ ವೇಳೆ ಉದ್ವೇಗಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

5 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

6 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago