Featured

ಉಡುಪಿ ಮರಳುಗಾರಿಕೆ ಸಮಸ್ಯೆ ; ಹೃದಯಾಘಾತದಿಂದ ವ್ಯಕ್ತಿ ಸಾವು

ಉಡುಪಿ: ಮರಳುಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಿದ ಕಾರಣ ನಿರ್ಮಾಣ ಕಾಮಗಾರಿಗೆ ಸಂಕಷ್ಟ ಎದುರಾಗಿದ್ದು ವಿವಿಧ ಕಟ್ಟಡ ನಿರ್ಮಾಣ ಗುತ್ತಿಗೆದಾರರು, ನೌಕರರು ಇದರ ವಿರುದ್ಧ ಬೀದಿಗಿಳಿದಿದ್ದಾರೆ. ಹೀಗೆ ಮರಳು ಹೋರಾಟದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮರಳು ಗಣಿಗಾರಿಕೆಗೆ ಅನುಮತಿ ನೀಡಬೇಕೆಂದು ಹೋರಾಟ ನಡೆಸುತ್ತಿದ್ದ ಕಾಪುವಿನ ಹೆಜಮಾಡಿ ಗ್ರಾಮದ ನಿವಾಸಿ ಮಹಮ್ಮದ ಹನೀಫ್ (42) ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಮರಳುಗಾರಿಕೆಗೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಹನೀಫ್ ಬಾಗವಹಿಸಿದ್ದ ವೇಳೆ ಇದ್ದಕ್ಕಿದ್ದಂತೆ ಉದ್ವೇಗಕ್ಕೆ ಒಳಗಾಗಿದ್ದಾರೆ. ಈ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮಣಿಪಾಲದ ಕೀಂಸಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲ ನೀಡದ ಕಾರಣ ಸಾವನ್ನಪ್ಪಿದ್ದಾರೆ.
3 ಮಕ್ಕಳು ಮತ್ತು ಪತ್ನಿಯೊಂದಿಗೆ ಬಾಡಿಗೆ ಮನೆಯಲ್ಲಿ ಹನೀಫ್ ವಾಸಿಸುತ್ತಿದ್ದರು, ಮರಳುಗಾರಿಕೆ ನಂಬಿ ಸಾಲ ಮಾಡಿಕೊಂಡಿದ್ದ ಹನೀಫ್ ಗೆ ಇತ್ತೀಚೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು ಎಂದು ಹೇಳಲಾಗಿದೆ.
ಹನೀಫ್ ಸುಮಾರು 6 ಲಕ್ಷ ರೂ. ಸಾಲ ಮಾಡಿ ಎರಡು ನಾಡದೋಣಿ ಖರೀದಿಸಿ ಮರಳುಗಾರಿಕೆ ನಡೆಸುತ್ತಿದ್ದರು. ಇದೀಗ ಜಿಲ್ಲೆಯಾದ್ಯಂತ ಮರಳುಗಾರಿಕೆ ಸಂಪೂರ್ಣ ಸ್ಥಗಿತವಾಗಿದ್ದು ಯಾವುದೇ ಕಾರಣಕ್ಕೆ ನದಿಯಿಂದ ಮರಳು ತೆಗೆವಂತಿಲ್ಲ ಎಂದ್ಬ ಸರ್ಕಾರ ಆದೇಶದಿಂದ ಕೆಲಸವಿಲ್ಲದೆ ಕುಳಿತಿದ್ದರು. ಇದೇ ಕಾರಣದಿಂದ ಪ್ರತಿಭಟನೆ ವೇಳೆ ಉದ್ವೇಗಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

9 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

10 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

10 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago