Featured

ಉಡುಪಿ ಮರಳುಗಾರಿಕೆ ಸಮಸ್ಯೆ ; ಹೃದಯಾಘಾತದಿಂದ ವ್ಯಕ್ತಿ ಸಾವು

ಉಡುಪಿ: ಮರಳುಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಿದ ಕಾರಣ ನಿರ್ಮಾಣ ಕಾಮಗಾರಿಗೆ ಸಂಕಷ್ಟ ಎದುರಾಗಿದ್ದು ವಿವಿಧ ಕಟ್ಟಡ ನಿರ್ಮಾಣ ಗುತ್ತಿಗೆದಾರರು, ನೌಕರರು ಇದರ ವಿರುದ್ಧ ಬೀದಿಗಿಳಿದಿದ್ದಾರೆ. ಹೀಗೆ ಮರಳು ಹೋರಾಟದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮರಳು ಗಣಿಗಾರಿಕೆಗೆ ಅನುಮತಿ ನೀಡಬೇಕೆಂದು ಹೋರಾಟ ನಡೆಸುತ್ತಿದ್ದ ಕಾಪುವಿನ ಹೆಜಮಾಡಿ ಗ್ರಾಮದ ನಿವಾಸಿ ಮಹಮ್ಮದ ಹನೀಫ್ (42) ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಮರಳುಗಾರಿಕೆಗೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಹನೀಫ್ ಬಾಗವಹಿಸಿದ್ದ ವೇಳೆ ಇದ್ದಕ್ಕಿದ್ದಂತೆ ಉದ್ವೇಗಕ್ಕೆ ಒಳಗಾಗಿದ್ದಾರೆ. ಈ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮಣಿಪಾಲದ ಕೀಂಸಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲ ನೀಡದ ಕಾರಣ ಸಾವನ್ನಪ್ಪಿದ್ದಾರೆ.
3 ಮಕ್ಕಳು ಮತ್ತು ಪತ್ನಿಯೊಂದಿಗೆ ಬಾಡಿಗೆ ಮನೆಯಲ್ಲಿ ಹನೀಫ್ ವಾಸಿಸುತ್ತಿದ್ದರು, ಮರಳುಗಾರಿಕೆ ನಂಬಿ ಸಾಲ ಮಾಡಿಕೊಂಡಿದ್ದ ಹನೀಫ್ ಗೆ ಇತ್ತೀಚೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು ಎಂದು ಹೇಳಲಾಗಿದೆ.
ಹನೀಫ್ ಸುಮಾರು 6 ಲಕ್ಷ ರೂ. ಸಾಲ ಮಾಡಿ ಎರಡು ನಾಡದೋಣಿ ಖರೀದಿಸಿ ಮರಳುಗಾರಿಕೆ ನಡೆಸುತ್ತಿದ್ದರು. ಇದೀಗ ಜಿಲ್ಲೆಯಾದ್ಯಂತ ಮರಳುಗಾರಿಕೆ ಸಂಪೂರ್ಣ ಸ್ಥಗಿತವಾಗಿದ್ದು ಯಾವುದೇ ಕಾರಣಕ್ಕೆ ನದಿಯಿಂದ ಮರಳು ತೆಗೆವಂತಿಲ್ಲ ಎಂದ್ಬ ಸರ್ಕಾರ ಆದೇಶದಿಂದ ಕೆಲಸವಿಲ್ಲದೆ ಕುಳಿತಿದ್ದರು. ಇದೇ ಕಾರಣದಿಂದ ಪ್ರತಿಭಟನೆ ವೇಳೆ ಉದ್ವೇಗಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago