ಉಡುಪಿ: ರಿಕ್ಷಾದಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ, ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು.
ಲಲಿತಾ ಅವರು, ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ, ಪೊಲೀಸರು ಚಿನ್ನ ಕಳೆದುಕೊಂಡವರು ಲಿತಲಾ ಅವರೇ ಅಂತ ಖಚಿತ ಪಡಿಸಿ, ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…