ಉಡುಪಿ : ಮರ ಕಡಿಯುತ್ತಿದ್ದ ವೇಳೆ , ಮೈಮೇಲೆ ಮರ ಬಿದ್ದು ಯುವಕ ಸಾವು – Vishwanews24

Featured, ಉಡುಪಿ

ಉಡುಪಿ : ಮರ ಕಡಿಯುತ್ತಿದ್ದ ವೇಳೆ , ಮೈಮೇಲೆ ಮರ ಬಿದ್ದು ಯುವಕ ಸಾವು

ಉಡುಪಿ: ಯಾವುದೇ ಸುರಕ್ಷತೆ ವಹಿಸದೆ ಮರ ಕಡಿಯುತ್ತಿದ್ದ ವೇಳೆ , ವ್ಯಕ್ತಿಯ ಮೈಮೇಲೆ ಮರ ಬಿದ್ದು ಮೃತ ಪಟ್ಟ ಘಟನೆ ಮಂಗಳವಾರ ಉಡುಪಿ ನಗರದಲ್ಲಿ ನಡೆದಿದೆ.

ಬಾಗಲಕೋಟೆ ಮೂಲದ, ಪ್ರಸ್ತುತ ಉಡುಪಿ ಬೀಡಿನಗುಡ್ಡೆ ನಿವಾಸಿಯಾಗಿರುವ ಸುರೇಶ ಸಂದಿಮನಿ (32) ಎಂಬವರು ಆ ಮೃತ ವ್ಯಕ್ತಿ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸುರೇಶ ಸಂದಿಮನಿಯವರನ್ನು, ಸುನಿಲ್ ಎಂಬಾತ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದು, ಕಲ್ಸಂಕ ಬಳಿ ನಿಧಿ ಹೋಮ್ಸ್‌ಎಂಬ ಮನೆಯ ಹಿಂಭಾಗದಲ್ಲಿರುವ ಜಾಗದಲ್ಲಿ ಬೆಳೆದಿರುವ ಮರಗಳನ್ನು ಆಪಾದಿತರಾದ ಸುನೀಲ್‌ ಮತ್ತು ಜಾಗದ ಮಾಲಕರಾದ ಪ್ರಭಾಕರ ಸಾಲ್ಯಾನ್‌ರವರು ಯಾವುದೇ ಸುರಕ್ಷಾ ಕವಚವನ್ನು ನೀಡದೇ ನಿರ್ಲಕ್ಷ ವಹಿಸಿ ಮರ ಕಡಿಸಿದ್ದು, ಮಧ್ಯಾಹ್ನದ ವೇಳೆಗೆ ಕಡಿಯುತ್ತಿದ್ದ ಮರವು ತುಂಡಾಗಿ ಅವರ ಮೈಮೇಲೆ ಬಿದ್ದು, ಹೊಟ್ಟೆಗೆ ಸೊಂಟಕ್ಕೆ ಹಾಗೂ ಕಾಲುಗಳಿಗೆ ತೀವ್ರ ಗಾಯವಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಯಾವುದೇ ಸುರಕ್ಷತೆ ನೀಡದೆ ನಿರ್ಲಕ್ಷ್ಯ ವಹಿಸಿದ್ದು ಕಾರಣವಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ – Vishwanews24

Leave a Reply