ಉಡುಪಿ: ಯಾವುದೇ ಸುರಕ್ಷತೆ ವಹಿಸದೆ ಮರ ಕಡಿಯುತ್ತಿದ್ದ ವೇಳೆ , ವ್ಯಕ್ತಿಯ ಮೈಮೇಲೆ ಮರ ಬಿದ್ದು ಮೃತ ಪಟ್ಟ ಘಟನೆ ಮಂಗಳವಾರ ಉಡುಪಿ ನಗರದಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ, ಪ್ರಸ್ತುತ ಉಡುಪಿ ಬೀಡಿನಗುಡ್ಡೆ ನಿವಾಸಿಯಾಗಿರುವ ಸುರೇಶ ಸಂದಿಮನಿ (32) ಎಂಬವರು ಆ ಮೃತ ವ್ಯಕ್ತಿ.
ಸುರೇಶ ಸಂದಿಮನಿಯವರನ್ನು, ಸುನಿಲ್ ಎಂಬಾತ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದು, ಕಲ್ಸಂಕ ಬಳಿ ನಿಧಿ ಹೋಮ್ಸ್ಎಂಬ ಮನೆಯ ಹಿಂಭಾಗದಲ್ಲಿರುವ ಜಾಗದಲ್ಲಿ ಬೆಳೆದಿರುವ ಮರಗಳನ್ನು ಆಪಾದಿತರಾದ ಸುನೀಲ್ ಮತ್ತು ಜಾಗದ ಮಾಲಕರಾದ ಪ್ರಭಾಕರ ಸಾಲ್ಯಾನ್ರವರು ಯಾವುದೇ ಸುರಕ್ಷಾ ಕವಚವನ್ನು ನೀಡದೇ ನಿರ್ಲಕ್ಷ ವಹಿಸಿ ಮರ ಕಡಿಸಿದ್ದು, ಮಧ್ಯಾಹ್ನದ ವೇಳೆಗೆ ಕಡಿಯುತ್ತಿದ್ದ ಮರವು ತುಂಡಾಗಿ ಅವರ ಮೈಮೇಲೆ ಬಿದ್ದು, ಹೊಟ್ಟೆಗೆ ಸೊಂಟಕ್ಕೆ ಹಾಗೂ ಕಾಲುಗಳಿಗೆ ತೀವ್ರ ಗಾಯವಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಯಾವುದೇ ಸುರಕ್ಷತೆ ನೀಡದೆ ನಿರ್ಲಕ್ಷ್ಯ ವಹಿಸಿದ್ದು ಕಾರಣವಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…