ಉಡುಪಿ: ಯಾವುದೇ ಸುರಕ್ಷತೆ ವಹಿಸದೆ ಮರ ಕಡಿಯುತ್ತಿದ್ದ ವೇಳೆ , ವ್ಯಕ್ತಿಯ ಮೈಮೇಲೆ ಮರ ಬಿದ್ದು ಮೃತ ಪಟ್ಟ ಘಟನೆ ಮಂಗಳವಾರ ಉಡುಪಿ ನಗರದಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ, ಪ್ರಸ್ತುತ ಉಡುಪಿ ಬೀಡಿನಗುಡ್ಡೆ ನಿವಾಸಿಯಾಗಿರುವ ಸುರೇಶ ಸಂದಿಮನಿ (32) ಎಂಬವರು ಆ ಮೃತ ವ್ಯಕ್ತಿ.
ಸುರೇಶ ಸಂದಿಮನಿಯವರನ್ನು, ಸುನಿಲ್ ಎಂಬಾತ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದು, ಕಲ್ಸಂಕ ಬಳಿ ನಿಧಿ ಹೋಮ್ಸ್ಎಂಬ ಮನೆಯ ಹಿಂಭಾಗದಲ್ಲಿರುವ ಜಾಗದಲ್ಲಿ ಬೆಳೆದಿರುವ ಮರಗಳನ್ನು ಆಪಾದಿತರಾದ ಸುನೀಲ್ ಮತ್ತು ಜಾಗದ ಮಾಲಕರಾದ ಪ್ರಭಾಕರ ಸಾಲ್ಯಾನ್ರವರು ಯಾವುದೇ ಸುರಕ್ಷಾ ಕವಚವನ್ನು ನೀಡದೇ ನಿರ್ಲಕ್ಷ ವಹಿಸಿ ಮರ ಕಡಿಸಿದ್ದು, ಮಧ್ಯಾಹ್ನದ ವೇಳೆಗೆ ಕಡಿಯುತ್ತಿದ್ದ ಮರವು ತುಂಡಾಗಿ ಅವರ ಮೈಮೇಲೆ ಬಿದ್ದು, ಹೊಟ್ಟೆಗೆ ಸೊಂಟಕ್ಕೆ ಹಾಗೂ ಕಾಲುಗಳಿಗೆ ತೀವ್ರ ಗಾಯವಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಯಾವುದೇ ಸುರಕ್ಷತೆ ನೀಡದೆ ನಿರ್ಲಕ್ಷ್ಯ ವಹಿಸಿದ್ದು ಕಾರಣವಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…